Andolana originals

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ಜೈಲುಪಾಲು, ಅಕ್ರಮ ಬೆಟ್ಟಿಂಗ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮೂಲದ ಶಾಸಕನ ಬಂಧನ ಹಾಗೂ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದ ಶಾಸಕ ಲೋಕಾಯುಕ್ತ ಪೊಲೀಸರ ವಶಕ್ಕೆ.. ಈ ರೀತಿಯ ಹತ್ತು ಹಲವು ಸುದ್ದಿಗಳನ್ನು ಮಾಧ್ಯಮಗಳಲ್ಲಿ ನೋಡಿದಾಗ ಅವರನ್ನು ಜನಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಿದ ಮತದಾರರ ಮನಸ್ಸಿಗೆ ಬೇಸರವಾಗುತ್ತದೆ.

ಶಾಸಕರು ಜನಪ್ರತಿನಿಧಿಗಳು. ವಿಧಾನಸಭೆಯಲ್ಲಿ ಅವರು ಶಾಸನ ರಚನೆ ಮಾಡಬೇಕಾದ ಜವಾಬ್ದಾರಿ ಹೊಂದಿರುತ್ತಾರೆ. ಆದರೆ ಕೆಲ ಶಾಸಕರು ತಮ್ಮ ಜವಾಬ್ದಾರಿ ಮರೆತು ಕಾನೂನು ಉಲ್ಲಂಘನೆ ಮಾಡಿ ಜೈಲು ಪಾಲಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ತಮ್ಮ ಕ್ಷೇತ್ರದ ಜನರ ಧ್ವನಿಯಾಗಿ ಮತದಾರರ ಕುಂದುಕೊರತೆಗಳನ್ನು ಆಲಿಸಿ ಸರ್ಕಾರದಿಂದ ಪರಿಹಾರ ಒದಗಿಸಬೇಕಾದ ಜನಪ್ರತಿನಿಧಿಗಳೇ ಈ ರೀತಿ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಪಾಲಾಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುತ್ತಿರುವ ಅಪಮಾನ.

ಶಾಸಕರು ಆರೋಪಿಗಳಾಗುವುದು ದೊಡ್ಡ ಕಳಂಕ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ಶಾಸಕರೂ ತಾನು ಹೊಂದಿರುವ ಸ್ಥಾನದ ಮಹತ್ವವನ್ನು ಅರಿತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ಅವಶ್ಯಕತೆ ಇದೆ. ಅದೇ ರೀತಿ ಪ್ರತಿಯೊಬ್ಬ ಮತದಾರನೂ ಸದೃಢವಾದ ದೇಶ ಕಟ್ಟಲು ಹಾಗೂ ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಿಸಲು ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸುವ ಅವಶ್ಯಕತೆಯಿದೆ.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

1 hour ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

1 hour ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

1 hour ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

1 hour ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

1 hour ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

1 hour ago