ಮೈಸೂರು-ಬೆಂಗಳೂರು ಹೈವೆಯ ಡಿವೈಡರ್ಗಳಲ್ಲಿ ಬೆಳೆಸಲಾಗಿದ್ದ ಹೂವಿನ ಗಿಡಗಳಿಗೆ ಬೆಂಕಿ ಹಾಕಿ ಸುಟ್ಟು ಹಾಕಲಾಗಿದೆ.
ಹೆದ್ದಾರಿಯು ಸುಂದರವಾಗಿ ಕಾಣಲಿ ಎಂದು ಹೆದ್ದಾರಿಯ ಡಿವೈಡರ್ಗಳಲ್ಲಿ ವಿವಿಧ ಜಾತಿಯ ಹೂವಿನ ಗಿಡಗಳನ್ನು ಬೆಳೆಸಲಾಗಿತ್ತು. ಆ ಗಿಡಗಳನ್ನು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ನಿರ್ವಹಣೆ ಮಾಡಬೇಕಿತ್ತು. ಆದರೆ ಬೇಸಿಗೆಯಲ್ಲಿ ಈ ಗಿಡಗಳು ನೀರಿಲ್ಲದೆ ಒಣಗಿ ಹೋಗಿದ್ದು, ಬೆಂಕಿ ತಗುಲಿ ಸುಟ್ಟು ಹೋಗಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹೆದ್ದಾರಿಯ ನಿರ್ವಹಣೆಗಾಗಿ ನಿತ್ಯ ಟೋಲ್ ಮೂಲಕ ಹಣ ಸಂಗ್ರಹಿಸಲಾಗುತ್ತದೆ. ಆದರೆ, ಹೆದ್ದಾರಿಯಲ್ಲಿನ ಗಿಡಗಳನ್ನೇ ರಕ್ಷಿಸಿಕೊಳ್ಳಲಾಗದ ಅಧಿಕಾರಿಗಳು ಇನ್ನು ಹೆದ್ದಾರಿಯನ್ನು ಹೇಗೆ ರಕ್ಷಿಸುತ್ತಾರೆ ಎಂಬ ಪ್ರಶ್ನೆ ಮೂಡಿದೆ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಹೆದ್ದಾರಿಯಲ್ಲಿನ ಹೂವಿನ ಗಿಡಗಳಿಗೆ ಬೆಂಕಿ ಹಾಕುವ ಬದಲು ನೀರು ಹಾಕಿ ಬೆಳೆಸಬೇಕಿದೆ. ಒಂದು ವೇಳೆ ಇದು ಕಿಡಿಗೇಡಿಗಳ ಕೃತ್ಯವಾಗಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…
ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…