Andolana originals

ಓದುಗರ ಪತ್ರ: ಲೋಕಸಭೆಯ ಉಪಾಧ್ಯಕ್ಷರ ಸ್ಥಾನ ಭರ್ತಿಯಾಗಲಿ

ಲೋಕಸಭೆಯ ಉಪಾಧ್ಯಕ್ಷರ ಸ್ಥಾನ ೨೦೧೯ರಿಂದ ಖಾಲಿಯಾಗಿಯೇ ಉಳಿದಿರುವ ಬಗ್ಗೆ ಲೋಕಸಭಾಸದಸ್ಯರೊಬ್ಬರು ತೀವ್ರ ಕಳವಳ ವ್ಯಕ್ತ ಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಲೋಕ ಸಭಾಧ್ಯಕ್ಷರ ಅನುಪಸ್ಥಿತಿ ಯಲ್ಲಿ ಲೋಕಸಭೆಯ ಉಪಾಧ್ಯಕ್ಷರು ಸಭೆಯ ಕಾರ್ಯಕಲಾಪಗಳ ಅಧ್ಯಕ್ಷತೆ ವಹಿಸುತ್ತಾರೆ. ಅಂತಹ ಸಂದರ್ಭಗಳಲ್ಲಿ ಲೋಕಸಭಾ ಅಧ್ಯಕ್ಷರಿಗೆ ಇರುವ ಎಲ್ಲಾ ಅಧಿಕಾರಗಳನ್ನು ಅವರು ಚಲಾಯಿಸಬಹುದು. ಆದರೆ, ರಾಜಕೀಯ ಕಾರಣದಿಂದಾಗಿ ಈ ಸ್ಥಾನವನ್ನು ತುಂಬದೇ ಇರುವುದು ಸರಿಯಲ್ಲ. ೬೦,೭೦ ಮತ್ತು ೮೦ ರ ದಶಕಗಳವರೆಗೂ ಈ ಸ್ಥಾನವನ್ನು ವಿರೋಧ ಪಕ್ಷದವರಿಗೆ ನೀಡುವ ಸಂಪ್ರದಾಯ ಚಾಲ್ತಿಯಲ್ಲಿತ್ತು.

ಆದರೆ ನಂತರದ ದಶಕಗಳಲ್ಲಿ ಈ ಸಂಪ್ರದಾಯ ನನೆಗುದಿಗೆ ಬಿದ್ದು, ಅಧ್ಯಕ್ಷ, ಹಾಗೂ ಉಪಾಧ್ಯಕ್ಷ ಎರಡೂ ಸ್ಥಾನಗಳಿಗೆ ಆಳುವ ಪಕ್ಷದ ಸದಸ್ಯರೇ ಚುನಾಯಿತರಾಗುತ್ತಿದ್ದಾರೆ. ಒಂದು ವೇಳೆ ಈ ಸ್ಥಾನವನ್ನು ವಿರೋಧ ಪಕ್ಷಗಳಿಗೆ ನೀಡಿದರೆ, ಆ ರೀತಿ ಆಯ್ಕೆ ಯಾಗುವ ಉಪಾಧ್ಯಕ್ಷರು, ಲೋಕಸಭೆಯಲ್ಲಿ ವಿರೋಧ ಪಕ್ಷಗಳ ದನಿಯಾಗಬಹುದು. ಅದೇನೇ ಇರಲಿ, ಈ ಸ್ಥಾನವನ್ನು ಶೀಘ್ರವಾಗಿ ತುಂಬುವತ್ತ ಕೇಂದ್ರ ಸರ್ಕಾರ ಇನ್ನು ಮುಂದಾದರೂ ಗಮನ ಹರಿಸಬೇಕಾಗಿದೆ.

-ಕೆ.ವಿ.ವಾಸು , ವಿವೇಕಾನಂದ ನಗರ,ಮೈಸೂರು

ಆಂದೋಲನ ಡೆಸ್ಕ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

6 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

7 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

7 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

7 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

8 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

8 hours ago