ಓದುಗರ ಪತ್ರ
ಲೋಕಸಭೆಯ ಉಪಾಧ್ಯಕ್ಷರ ಸ್ಥಾನ ೨೦೧೯ರಿಂದ ಖಾಲಿಯಾಗಿಯೇ ಉಳಿದಿರುವ ಬಗ್ಗೆ ಲೋಕಸಭಾಸದಸ್ಯರೊಬ್ಬರು ತೀವ್ರ ಕಳವಳ ವ್ಯಕ್ತ ಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಲೋಕ ಸಭಾಧ್ಯಕ್ಷರ ಅನುಪಸ್ಥಿತಿ ಯಲ್ಲಿ ಲೋಕಸಭೆಯ ಉಪಾಧ್ಯಕ್ಷರು ಸಭೆಯ ಕಾರ್ಯಕಲಾಪಗಳ ಅಧ್ಯಕ್ಷತೆ ವಹಿಸುತ್ತಾರೆ. ಅಂತಹ ಸಂದರ್ಭಗಳಲ್ಲಿ ಲೋಕಸಭಾ ಅಧ್ಯಕ್ಷರಿಗೆ ಇರುವ ಎಲ್ಲಾ ಅಧಿಕಾರಗಳನ್ನು ಅವರು ಚಲಾಯಿಸಬಹುದು. ಆದರೆ, ರಾಜಕೀಯ ಕಾರಣದಿಂದಾಗಿ ಈ ಸ್ಥಾನವನ್ನು ತುಂಬದೇ ಇರುವುದು ಸರಿಯಲ್ಲ. ೬೦,೭೦ ಮತ್ತು ೮೦ ರ ದಶಕಗಳವರೆಗೂ ಈ ಸ್ಥಾನವನ್ನು ವಿರೋಧ ಪಕ್ಷದವರಿಗೆ ನೀಡುವ ಸಂಪ್ರದಾಯ ಚಾಲ್ತಿಯಲ್ಲಿತ್ತು.
ಆದರೆ ನಂತರದ ದಶಕಗಳಲ್ಲಿ ಈ ಸಂಪ್ರದಾಯ ನನೆಗುದಿಗೆ ಬಿದ್ದು, ಅಧ್ಯಕ್ಷ, ಹಾಗೂ ಉಪಾಧ್ಯಕ್ಷ ಎರಡೂ ಸ್ಥಾನಗಳಿಗೆ ಆಳುವ ಪಕ್ಷದ ಸದಸ್ಯರೇ ಚುನಾಯಿತರಾಗುತ್ತಿದ್ದಾರೆ. ಒಂದು ವೇಳೆ ಈ ಸ್ಥಾನವನ್ನು ವಿರೋಧ ಪಕ್ಷಗಳಿಗೆ ನೀಡಿದರೆ, ಆ ರೀತಿ ಆಯ್ಕೆ ಯಾಗುವ ಉಪಾಧ್ಯಕ್ಷರು, ಲೋಕಸಭೆಯಲ್ಲಿ ವಿರೋಧ ಪಕ್ಷಗಳ ದನಿಯಾಗಬಹುದು. ಅದೇನೇ ಇರಲಿ, ಈ ಸ್ಥಾನವನ್ನು ಶೀಘ್ರವಾಗಿ ತುಂಬುವತ್ತ ಕೇಂದ್ರ ಸರ್ಕಾರ ಇನ್ನು ಮುಂದಾದರೂ ಗಮನ ಹರಿಸಬೇಕಾಗಿದೆ.
-ಕೆ.ವಿ.ವಾಸು , ವಿವೇಕಾನಂದ ನಗರ,ಮೈಸೂರು
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…
ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…
ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…
ಬೆಂಗಳೂರು : ಆರ್ಎಸ್ಎಸ್ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…