ಓದುಗರ ಪತ್ರ
ಲೋಕಸಭೆಯ ಉಪಾಧ್ಯಕ್ಷರ ಸ್ಥಾನ ೨೦೧೯ರಿಂದ ಖಾಲಿಯಾಗಿಯೇ ಉಳಿದಿರುವ ಬಗ್ಗೆ ಲೋಕಸಭಾಸದಸ್ಯರೊಬ್ಬರು ತೀವ್ರ ಕಳವಳ ವ್ಯಕ್ತ ಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಲೋಕ ಸಭಾಧ್ಯಕ್ಷರ ಅನುಪಸ್ಥಿತಿ ಯಲ್ಲಿ ಲೋಕಸಭೆಯ ಉಪಾಧ್ಯಕ್ಷರು ಸಭೆಯ ಕಾರ್ಯಕಲಾಪಗಳ ಅಧ್ಯಕ್ಷತೆ ವಹಿಸುತ್ತಾರೆ. ಅಂತಹ ಸಂದರ್ಭಗಳಲ್ಲಿ ಲೋಕಸಭಾ ಅಧ್ಯಕ್ಷರಿಗೆ ಇರುವ ಎಲ್ಲಾ ಅಧಿಕಾರಗಳನ್ನು ಅವರು ಚಲಾಯಿಸಬಹುದು. ಆದರೆ, ರಾಜಕೀಯ ಕಾರಣದಿಂದಾಗಿ ಈ ಸ್ಥಾನವನ್ನು ತುಂಬದೇ ಇರುವುದು ಸರಿಯಲ್ಲ. ೬೦,೭೦ ಮತ್ತು ೮೦ ರ ದಶಕಗಳವರೆಗೂ ಈ ಸ್ಥಾನವನ್ನು ವಿರೋಧ ಪಕ್ಷದವರಿಗೆ ನೀಡುವ ಸಂಪ್ರದಾಯ ಚಾಲ್ತಿಯಲ್ಲಿತ್ತು.
ಆದರೆ ನಂತರದ ದಶಕಗಳಲ್ಲಿ ಈ ಸಂಪ್ರದಾಯ ನನೆಗುದಿಗೆ ಬಿದ್ದು, ಅಧ್ಯಕ್ಷ, ಹಾಗೂ ಉಪಾಧ್ಯಕ್ಷ ಎರಡೂ ಸ್ಥಾನಗಳಿಗೆ ಆಳುವ ಪಕ್ಷದ ಸದಸ್ಯರೇ ಚುನಾಯಿತರಾಗುತ್ತಿದ್ದಾರೆ. ಒಂದು ವೇಳೆ ಈ ಸ್ಥಾನವನ್ನು ವಿರೋಧ ಪಕ್ಷಗಳಿಗೆ ನೀಡಿದರೆ, ಆ ರೀತಿ ಆಯ್ಕೆ ಯಾಗುವ ಉಪಾಧ್ಯಕ್ಷರು, ಲೋಕಸಭೆಯಲ್ಲಿ ವಿರೋಧ ಪಕ್ಷಗಳ ದನಿಯಾಗಬಹುದು. ಅದೇನೇ ಇರಲಿ, ಈ ಸ್ಥಾನವನ್ನು ಶೀಘ್ರವಾಗಿ ತುಂಬುವತ್ತ ಕೇಂದ್ರ ಸರ್ಕಾರ ಇನ್ನು ಮುಂದಾದರೂ ಗಮನ ಹರಿಸಬೇಕಾಗಿದೆ.
-ಕೆ.ವಿ.ವಾಸು , ವಿವೇಕಾನಂದ ನಗರ,ಮೈಸೂರು
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…