Andolana originals

ಓದುಗರ ಪತ್ರ| ಜ್ಯಾತ್ಯಾತೀತ ನಾಗರೀಕ ಸಂಹಿತೆ ಬಗ್ಗೆ ಪ್ರಧಾನಿ ವಿವರಣೆ ನೀಡಲಿ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಭಾಷಣ ದೇಶದಲ್ಲಿ ಕೋಮು ದ್ವೇಷವನ್ನು ಹೆಚ್ಚು ಮಾಡಲು ಪ್ರಚೋಧಿಸುವಂತಿದೆ.

ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿದ ಅವರು, ‘ದೇಶದಲ್ಲಿ ಸದ್ಯದಲ್ಲಿ ಜಾರಿಯಲ್ಲಿರುವ ನಾಗರಿಕ ಸಂಹಿತೆಯು ಕೋಮುವಾದ ಮತ್ತು ತಾರತಮ್ಯದಿಂದ ಕೂಡಿದ್ದು, ದೇಶವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿದೆ. ಇಂತಹ ಸಂಹಿತೆಯೊಂದಿಗೆ ನಾವು ೭೫ ವರ್ಷಗಳ ಕಾಲ ಜೀವಿಸಿದ್ದು, ದೇಶಕ್ಕೆ ಜಾತ್ಯತೀತ ನಾಗರಿಕ ಸಂಹಿತೆ ತುರ್ತು’ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ದೇಶ ಸ್ವತಂತ್ರಗೊಂಡ ಬಳಿಕ ಡಾ.ಬಿ.ಆರ್.ಅಂಬೇಡ್ಕರ್‌ರವರು ರಚಿಸಿದ ಸಂವಿಧಾನದ ಕಾನೂನಿನಡಿ ಆಡಳಿತ ನಡೆಸಲಾಗುತ್ತಿದೆ. ಇಂತಹ ದೇಶದಲ್ಲಿ ಇಷ್ಟು ವರ್ಷಗಳ ಕಾಲ ಕೋಮುವಾದಿ ನಾಗರಿಕ ಸಂಹಿತೆ ಹೊಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ಹೇಳಿರುವುದು ಸಂವಿಧಾನ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ರವರಿಗೆ ಅಪಮಾನ ಮಾಡಿದಂತಾಗಿದೆ. ಅಲ್ಲದೇ ದೇಶದ ಸೌರ್ಹದತೆಗೆ ಧಕ್ಕೆಯುಂಟು ಮಾಡಿದೆ.

ಪ್ರಸ್ತುತದ ನಾಗರಿಕ ಸಂಹಿತೆ ದೇಶದಲ್ಲಿ ಕೋಮುವಾದವನ್ನು ಬಿತ್ತುವುದಾದರೇ ಮೋದಿಯವರು ಜಾರಿ ಮಾಡಲು ಹೊರಟಿರುವ ಜ್ಯಾತ್ಯತೀತ ನಾಗರಿಕ ಸಂಹಿತೆ ಎಂದರೇನು? ಅದು ಏನನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಅವರೇ ವಿವರಣೆ ನೀಡಲಿ. ಭಾರತವನ್ನು ಸಂಪೂರ್ಣವಾಗಿ ಹಿಂದೂ ರಾಷ್ಟ್ರ ಮಾಡಬೇಕು ಎಂಬ ಪಣ ತೊಟ್ಟಿರುವ ನರೇಂದ್ರ ಮೋದಿಯವರಿಗೆ ಹಿಂದೂ ರಾಷ್ಟ್ರ ಮಾಡುವುದೇ ಜ್ಯಾತ್ಯಾತೀತ ಸಂಹಿತೆಯೇ? ಇದಕ್ಕೆ ಅವರು ಮೊದಲು ಉತ್ತರಿಸಲಿ.

-ಎಂ.ಸುರೇಶ್, ಸಿಂಧುವಳ್ಳಿ, ನಂಜನಗೂಡು ತಾ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

8 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

9 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

10 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

10 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

11 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

11 hours ago