Andolana originals

ಓದುಗರ ಪತ್ರ| ಜ್ಯಾತ್ಯಾತೀತ ನಾಗರೀಕ ಸಂಹಿತೆ ಬಗ್ಗೆ ಪ್ರಧಾನಿ ವಿವರಣೆ ನೀಡಲಿ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಭಾಷಣ ದೇಶದಲ್ಲಿ ಕೋಮು ದ್ವೇಷವನ್ನು ಹೆಚ್ಚು ಮಾಡಲು ಪ್ರಚೋಧಿಸುವಂತಿದೆ.

ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿದ ಅವರು, ‘ದೇಶದಲ್ಲಿ ಸದ್ಯದಲ್ಲಿ ಜಾರಿಯಲ್ಲಿರುವ ನಾಗರಿಕ ಸಂಹಿತೆಯು ಕೋಮುವಾದ ಮತ್ತು ತಾರತಮ್ಯದಿಂದ ಕೂಡಿದ್ದು, ದೇಶವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿದೆ. ಇಂತಹ ಸಂಹಿತೆಯೊಂದಿಗೆ ನಾವು ೭೫ ವರ್ಷಗಳ ಕಾಲ ಜೀವಿಸಿದ್ದು, ದೇಶಕ್ಕೆ ಜಾತ್ಯತೀತ ನಾಗರಿಕ ಸಂಹಿತೆ ತುರ್ತು’ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ದೇಶ ಸ್ವತಂತ್ರಗೊಂಡ ಬಳಿಕ ಡಾ.ಬಿ.ಆರ್.ಅಂಬೇಡ್ಕರ್‌ರವರು ರಚಿಸಿದ ಸಂವಿಧಾನದ ಕಾನೂನಿನಡಿ ಆಡಳಿತ ನಡೆಸಲಾಗುತ್ತಿದೆ. ಇಂತಹ ದೇಶದಲ್ಲಿ ಇಷ್ಟು ವರ್ಷಗಳ ಕಾಲ ಕೋಮುವಾದಿ ನಾಗರಿಕ ಸಂಹಿತೆ ಹೊಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ಹೇಳಿರುವುದು ಸಂವಿಧಾನ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ರವರಿಗೆ ಅಪಮಾನ ಮಾಡಿದಂತಾಗಿದೆ. ಅಲ್ಲದೇ ದೇಶದ ಸೌರ್ಹದತೆಗೆ ಧಕ್ಕೆಯುಂಟು ಮಾಡಿದೆ.

ಪ್ರಸ್ತುತದ ನಾಗರಿಕ ಸಂಹಿತೆ ದೇಶದಲ್ಲಿ ಕೋಮುವಾದವನ್ನು ಬಿತ್ತುವುದಾದರೇ ಮೋದಿಯವರು ಜಾರಿ ಮಾಡಲು ಹೊರಟಿರುವ ಜ್ಯಾತ್ಯತೀತ ನಾಗರಿಕ ಸಂಹಿತೆ ಎಂದರೇನು? ಅದು ಏನನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಅವರೇ ವಿವರಣೆ ನೀಡಲಿ. ಭಾರತವನ್ನು ಸಂಪೂರ್ಣವಾಗಿ ಹಿಂದೂ ರಾಷ್ಟ್ರ ಮಾಡಬೇಕು ಎಂಬ ಪಣ ತೊಟ್ಟಿರುವ ನರೇಂದ್ರ ಮೋದಿಯವರಿಗೆ ಹಿಂದೂ ರಾಷ್ಟ್ರ ಮಾಡುವುದೇ ಜ್ಯಾತ್ಯಾತೀತ ಸಂಹಿತೆಯೇ? ಇದಕ್ಕೆ ಅವರು ಮೊದಲು ಉತ್ತರಿಸಲಿ.

-ಎಂ.ಸುರೇಶ್, ಸಿಂಧುವಳ್ಳಿ, ನಂಜನಗೂಡು ತಾ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

4 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

5 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

6 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

12 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

12 hours ago