ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಭಾಷಣ ದೇಶದಲ್ಲಿ ಕೋಮು ದ್ವೇಷವನ್ನು ಹೆಚ್ಚು ಮಾಡಲು ಪ್ರಚೋಧಿಸುವಂತಿದೆ.
ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿದ ಅವರು, ‘ದೇಶದಲ್ಲಿ ಸದ್ಯದಲ್ಲಿ ಜಾರಿಯಲ್ಲಿರುವ ನಾಗರಿಕ ಸಂಹಿತೆಯು ಕೋಮುವಾದ ಮತ್ತು ತಾರತಮ್ಯದಿಂದ ಕೂಡಿದ್ದು, ದೇಶವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿದೆ. ಇಂತಹ ಸಂಹಿತೆಯೊಂದಿಗೆ ನಾವು ೭೫ ವರ್ಷಗಳ ಕಾಲ ಜೀವಿಸಿದ್ದು, ದೇಶಕ್ಕೆ ಜಾತ್ಯತೀತ ನಾಗರಿಕ ಸಂಹಿತೆ ತುರ್ತು’ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ದೇಶ ಸ್ವತಂತ್ರಗೊಂಡ ಬಳಿಕ ಡಾ.ಬಿ.ಆರ್.ಅಂಬೇಡ್ಕರ್ರವರು ರಚಿಸಿದ ಸಂವಿಧಾನದ ಕಾನೂನಿನಡಿ ಆಡಳಿತ ನಡೆಸಲಾಗುತ್ತಿದೆ. ಇಂತಹ ದೇಶದಲ್ಲಿ ಇಷ್ಟು ವರ್ಷಗಳ ಕಾಲ ಕೋಮುವಾದಿ ನಾಗರಿಕ ಸಂಹಿತೆ ಹೊಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ಹೇಳಿರುವುದು ಸಂವಿಧಾನ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ರವರಿಗೆ ಅಪಮಾನ ಮಾಡಿದಂತಾಗಿದೆ. ಅಲ್ಲದೇ ದೇಶದ ಸೌರ್ಹದತೆಗೆ ಧಕ್ಕೆಯುಂಟು ಮಾಡಿದೆ.
ಪ್ರಸ್ತುತದ ನಾಗರಿಕ ಸಂಹಿತೆ ದೇಶದಲ್ಲಿ ಕೋಮುವಾದವನ್ನು ಬಿತ್ತುವುದಾದರೇ ಮೋದಿಯವರು ಜಾರಿ ಮಾಡಲು ಹೊರಟಿರುವ ಜ್ಯಾತ್ಯತೀತ ನಾಗರಿಕ ಸಂಹಿತೆ ಎಂದರೇನು? ಅದು ಏನನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಅವರೇ ವಿವರಣೆ ನೀಡಲಿ. ಭಾರತವನ್ನು ಸಂಪೂರ್ಣವಾಗಿ ಹಿಂದೂ ರಾಷ್ಟ್ರ ಮಾಡಬೇಕು ಎಂಬ ಪಣ ತೊಟ್ಟಿರುವ ನರೇಂದ್ರ ಮೋದಿಯವರಿಗೆ ಹಿಂದೂ ರಾಷ್ಟ್ರ ಮಾಡುವುದೇ ಜ್ಯಾತ್ಯಾತೀತ ಸಂಹಿತೆಯೇ? ಇದಕ್ಕೆ ಅವರು ಮೊದಲು ಉತ್ತರಿಸಲಿ.
-ಎಂ.ಸುರೇಶ್, ಸಿಂಧುವಳ್ಳಿ, ನಂಜನಗೂಡು ತಾ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…