Andolana originals

ಓದುಗರ ಪತ್ರ: ಸಾಹಿತ್ಯ ಸಮ್ಮೇಳನಗಳ ಉದ್ದೇಶ ಈಡೇರಲಿ

ಡಿಸೆಂಬರ್ ೨೦ರಿಂದ ೨೨ರವರೆಗೆ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಹಿಂದಿನ ಸಮ್ಮೇಳನಗಳಲ್ಲಿ ಆದ ಪ್ರಮಾದಗಳು ಮರುಕಳಿಸದಿರಲಿ ಎಂಬುದು ಕನ್ನಡ ಸಾಹಿತ್ಯಾಸಕ್ತರ ಆಶಯವಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳು ಕಳೆಗುಂದುತ್ತಿವೆ. ಸಾಹಿತ್ಯ ಸಮ್ಮೇಳನಗಳು ಎಂದರೆ ಜನರೇ ಸೇರುವುದಿಲ್ಲ. ಇನ್ನು ಕನ್ನಡದ ಉಳಿವಿಗೆ ಸಮ್ಮೇಳನಗಳಲ್ಲಿ ತೆಗೆದುಕೊಂಡ ನಿರ್ಣಯಗಳಂತೂ ಕೇವಲ ಭಾಷಣಕ್ಕಷ್ಟೇ ಸೀಮಿತವಾಗಿವೆಯೇ ವಿನಾ ಅವು ಕಾರ್ಯರೂಪಕ್ಕೆ ಬರುವುದೇ ಇಲ್ಲ. ಇತ್ತೀಚೆಗೆ ಸಾಹಿತ್ಯ ಸಮ್ಮೇಳನಗಳು ಹಂತ ಹಂತವಾಗಿ ರಾಜಕಾರಣಿಗಳ ಹಿಡಿತಕ್ಕೆ ಜಾರುತ್ತಿವೆ. ಅವು ರಾಜಕೀಯ ವೇದಿಕೆಗಳಾಗಿ ಬದಲಾಗುತ್ತಿವೆ. ಸಮ್ಮೇಳನದ ವೇದಿಕೆಗಳಲ್ಲಿ ಸಾಹಿತ್ಯದ ವಿಚಾರಗಳಿಗಿಂತರಾಜಕೀಯ ಪ್ರೇರಿತ ವಿಚಾರಗಳೇ ತುಂಬಿರುತ್ತವೆ.

ಸರ್ಕಾರ ಸಾಹಿತ್ಯ ಸಮ್ಮೇಳನಗಳಿಗೆ ಕೋಟ್ಯಂತರ ರೂ. ವ್ಯಹಿಸಿದರೂ ಅಲ್ಲಿ ಸಾಹಿತ್ಯ ಪ್ರೇಮಿಗಳಿಗೆ ಸರಿಯಾದ ಊಟ, ಕುಡಿಯುವ ನೀರು, ವಸತಿಯಂತಹ ಮೂಲ ಸೌಕರ್ಯಗಳೇ ಇರುವುದಿಲ್ಲ. ಕಾರ್ಯಕ್ರಮಗಳೂ ಸಮಯಕ್ಕೆ ಸರಿಯಾಗಿ ಆರಂಭಗೊಳ್ಳುವುದಿಲ್ಲ. ಇದರಿಂದಾಗಿ ಸಾಹಿತ್ಯ ಸಮ್ಮೇಳನಗಳು ಎಂದರೆ ಜನರಿಗೆ ತಾತ್ಸರ ಭಾವನೆ ಇದೆ. ಹೀಗಾಗಿ ವರ್ಷದಿಂದ ವರ್ಷಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನಗಳು ಕಳೆಗುಂದುತ್ತಿವೆ. ಆದ್ದರಿಂದ ಕಸಾಪ ಈ ಭಾರಿ ಮಂಡ್ಯದಲ್ಲಿ ನಡೆಸುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಸಾಹಿತ್ಯ ಸಮ್ಮೇಳನಗಳ ಉದ್ದೇಶಗಳು ಜನರಿಗೆ ತಲುಪುವಂತೆ ಮಾಡಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

33 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

1 hour ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

2 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago