Andolana originals

ಓದುಗರ ಪತ್ರ: ಸಾಹಿತ್ಯ ಸಮ್ಮೇಳನಗಳ ಉದ್ದೇಶ ಈಡೇರಲಿ

ಡಿಸೆಂಬರ್ ೨೦ರಿಂದ ೨೨ರವರೆಗೆ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಹಿಂದಿನ ಸಮ್ಮೇಳನಗಳಲ್ಲಿ ಆದ ಪ್ರಮಾದಗಳು ಮರುಕಳಿಸದಿರಲಿ ಎಂಬುದು ಕನ್ನಡ ಸಾಹಿತ್ಯಾಸಕ್ತರ ಆಶಯವಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳು ಕಳೆಗುಂದುತ್ತಿವೆ. ಸಾಹಿತ್ಯ ಸಮ್ಮೇಳನಗಳು ಎಂದರೆ ಜನರೇ ಸೇರುವುದಿಲ್ಲ. ಇನ್ನು ಕನ್ನಡದ ಉಳಿವಿಗೆ ಸಮ್ಮೇಳನಗಳಲ್ಲಿ ತೆಗೆದುಕೊಂಡ ನಿರ್ಣಯಗಳಂತೂ ಕೇವಲ ಭಾಷಣಕ್ಕಷ್ಟೇ ಸೀಮಿತವಾಗಿವೆಯೇ ವಿನಾ ಅವು ಕಾರ್ಯರೂಪಕ್ಕೆ ಬರುವುದೇ ಇಲ್ಲ. ಇತ್ತೀಚೆಗೆ ಸಾಹಿತ್ಯ ಸಮ್ಮೇಳನಗಳು ಹಂತ ಹಂತವಾಗಿ ರಾಜಕಾರಣಿಗಳ ಹಿಡಿತಕ್ಕೆ ಜಾರುತ್ತಿವೆ. ಅವು ರಾಜಕೀಯ ವೇದಿಕೆಗಳಾಗಿ ಬದಲಾಗುತ್ತಿವೆ. ಸಮ್ಮೇಳನದ ವೇದಿಕೆಗಳಲ್ಲಿ ಸಾಹಿತ್ಯದ ವಿಚಾರಗಳಿಗಿಂತರಾಜಕೀಯ ಪ್ರೇರಿತ ವಿಚಾರಗಳೇ ತುಂಬಿರುತ್ತವೆ.

ಸರ್ಕಾರ ಸಾಹಿತ್ಯ ಸಮ್ಮೇಳನಗಳಿಗೆ ಕೋಟ್ಯಂತರ ರೂ. ವ್ಯಹಿಸಿದರೂ ಅಲ್ಲಿ ಸಾಹಿತ್ಯ ಪ್ರೇಮಿಗಳಿಗೆ ಸರಿಯಾದ ಊಟ, ಕುಡಿಯುವ ನೀರು, ವಸತಿಯಂತಹ ಮೂಲ ಸೌಕರ್ಯಗಳೇ ಇರುವುದಿಲ್ಲ. ಕಾರ್ಯಕ್ರಮಗಳೂ ಸಮಯಕ್ಕೆ ಸರಿಯಾಗಿ ಆರಂಭಗೊಳ್ಳುವುದಿಲ್ಲ. ಇದರಿಂದಾಗಿ ಸಾಹಿತ್ಯ ಸಮ್ಮೇಳನಗಳು ಎಂದರೆ ಜನರಿಗೆ ತಾತ್ಸರ ಭಾವನೆ ಇದೆ. ಹೀಗಾಗಿ ವರ್ಷದಿಂದ ವರ್ಷಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನಗಳು ಕಳೆಗುಂದುತ್ತಿವೆ. ಆದ್ದರಿಂದ ಕಸಾಪ ಈ ಭಾರಿ ಮಂಡ್ಯದಲ್ಲಿ ನಡೆಸುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಸಾಹಿತ್ಯ ಸಮ್ಮೇಳನಗಳ ಉದ್ದೇಶಗಳು ಜನರಿಗೆ ತಲುಪುವಂತೆ ಮಾಡಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

4 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

11 mins ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

59 mins ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

3 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

6 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

6 hours ago