ಈ ಬಾರಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂ.ಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇಷ್ಟೊಂದು ಹಣ ವ್ಯಯಿಸಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡುತ್ತಿದ್ದರೂ ಇದರಿಂದ ಕನ್ನಡ ಹಾಗೂ ಕನ್ನಡಿಗರಿಗೆ ಏನಾದರೂ ಉಪಯೋಗವಾಗುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.
ರಾಜ್ಯದಲ್ಲಿ ಅನ್ಯ ಭಾಷಿಗರ ಹಾವಳಿ ಹೆಚ್ಚಾಗಿದೆ. ಅದರಲ್ಲಿಯೂ ಬೆಂಗಳೂರಿನಂತಹ ನಗರದಲ್ಲಿ ಅನ್ಯಭಾಷಿಗರೇ ಹೆಚ್ಚಾಗಿದ್ದು, ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕು ಎಂಬುದಕ್ಕೂ ಹೋರಾಟಗಳನ್ನು ಮಾಡಬೇಕಾಗಿದೆ. ಪ್ರತಿ ಬಾರಿ ಸಮ್ಮೇಳನಗಳು ನಡೆದಾಗಲೂ ಕನ್ನಡ ಭಾಷೆಯ ಸಮೃದ್ಧಿಗಾಗಿ ಹೊಸ ಹೊಸ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಅವುಗಳನ್ನು ಜನರಿಗೆ ತಲುಪಿಸಲು ಯೋಜನೆಗಳನ್ನು ರೂಪಿಸಿಕೊಳ್ಳಲಾಗುತ್ತದೆ. ಆದರೆ, ಅವು ಎಚ್ಚರಮಟ್ಟಿಗೆ ಕನ್ನಡಿಗರ ಮೇಲೆ ಪರಿಣಾಮ ಬೀರುತ್ತಿವೆಯೋ ತಿಳಿಯದು.
ಇತ್ತೀಚೆಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರದಲ್ಲಿಯೂ ಭಾರಿ ವಿರೋಧಗಳು ಕೇಳಿಬಂದಿದ್ದವು. ಹೀಗೆ ಅನ್ಯಭಾಷೆಗಳ ಹಾವಳಿಯ ನಡುವೆ ಕರ್ನಾಟಕದಲ್ಲಿಯೇ ಕನ್ನಡ ಭಾಷೆಯ ಉಳಿವಿಗಾಗಿ ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನೂರಾರು ಕೋಟಿ ರೂ. ವ್ಯಯಿಸಿ ಮಾಡುವ ಇಂತಹ ಸಾಹಿತ್ಯ ಸಮ್ಮೇಳನಗಳಿಂದ ಕನ್ನಡನಾಡಿಗೆ ಏನಾದರೂ ಪ್ರಯೋಜನವಾಗು ವಂತಾಗಲಿ.
-ಜಾಕೀರ್ ಖಾನ್, ಸಾತಗಳ್ಳಿ, ಮೈಸೂರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…