Andolana originals

ಓದುಗರ ಪತ್ರ| ಸಾಹಿತ್ಯ ಸಮ್ಮೇಳನಗಳ ಉದ್ದೇಶ ಈಡೇರಲಿ

ಈ ಬಾರಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂ.ಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇಷ್ಟೊಂದು ಹಣ ವ್ಯಯಿಸಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡುತ್ತಿದ್ದರೂ ಇದರಿಂದ ಕನ್ನಡ ಹಾಗೂ ಕನ್ನಡಿಗರಿಗೆ ಏನಾದರೂ ಉಪಯೋಗವಾಗುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ರಾಜ್ಯದಲ್ಲಿ ಅನ್ಯ ಭಾಷಿಗರ ಹಾವಳಿ ಹೆಚ್ಚಾಗಿದೆ. ಅದರಲ್ಲಿಯೂ ಬೆಂಗಳೂರಿನಂತಹ ನಗರದಲ್ಲಿ ಅನ್ಯಭಾಷಿಗರೇ ಹೆಚ್ಚಾಗಿದ್ದು, ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕು ಎಂಬುದಕ್ಕೂ ಹೋರಾಟಗಳನ್ನು ಮಾಡಬೇಕಾಗಿದೆ. ಪ್ರತಿ ಬಾರಿ ಸಮ್ಮೇಳನಗಳು ನಡೆದಾಗಲೂ ಕನ್ನಡ ಭಾಷೆಯ ಸಮೃದ್ಧಿಗಾಗಿ ಹೊಸ ಹೊಸ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಅವುಗಳನ್ನು ಜನರಿಗೆ ತಲುಪಿಸಲು ಯೋಜನೆಗಳನ್ನು ರೂಪಿಸಿಕೊಳ್ಳಲಾಗುತ್ತದೆ. ಆದರೆ, ಅವು ಎಚ್ಚರಮಟ್ಟಿಗೆ ಕನ್ನಡಿಗರ ಮೇಲೆ ಪರಿಣಾಮ ಬೀರುತ್ತಿವೆಯೋ ತಿಳಿಯದು.

ಇತ್ತೀಚೆಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರದಲ್ಲಿಯೂ ಭಾರಿ ವಿರೋಧಗಳು ಕೇಳಿಬಂದಿದ್ದವು. ಹೀಗೆ ಅನ್ಯಭಾಷೆಗಳ ಹಾವಳಿಯ ನಡುವೆ ಕರ್ನಾಟಕದಲ್ಲಿಯೇ ಕನ್ನಡ ಭಾಷೆಯ ಉಳಿವಿಗಾಗಿ ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನೂರಾರು ಕೋಟಿ ರೂ. ವ್ಯಯಿಸಿ ಮಾಡುವ ಇಂತಹ ಸಾಹಿತ್ಯ ಸಮ್ಮೇಳನಗಳಿಂದ ಕನ್ನಡನಾಡಿಗೆ ಏನಾದರೂ ಪ್ರಯೋಜನವಾಗು ವಂತಾಗಲಿ.

-ಜಾಕೀರ್ ಖಾನ್, ಸಾತಗಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

35 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

2 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago