Andolana originals

ಓದುಗರ ಪತ್ರ| ಸಾಹಿತ್ಯ ಸಮ್ಮೇಳನಗಳ ಉದ್ದೇಶ ಈಡೇರಲಿ

ಈ ಬಾರಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂ.ಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇಷ್ಟೊಂದು ಹಣ ವ್ಯಯಿಸಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡುತ್ತಿದ್ದರೂ ಇದರಿಂದ ಕನ್ನಡ ಹಾಗೂ ಕನ್ನಡಿಗರಿಗೆ ಏನಾದರೂ ಉಪಯೋಗವಾಗುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ರಾಜ್ಯದಲ್ಲಿ ಅನ್ಯ ಭಾಷಿಗರ ಹಾವಳಿ ಹೆಚ್ಚಾಗಿದೆ. ಅದರಲ್ಲಿಯೂ ಬೆಂಗಳೂರಿನಂತಹ ನಗರದಲ್ಲಿ ಅನ್ಯಭಾಷಿಗರೇ ಹೆಚ್ಚಾಗಿದ್ದು, ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕು ಎಂಬುದಕ್ಕೂ ಹೋರಾಟಗಳನ್ನು ಮಾಡಬೇಕಾಗಿದೆ. ಪ್ರತಿ ಬಾರಿ ಸಮ್ಮೇಳನಗಳು ನಡೆದಾಗಲೂ ಕನ್ನಡ ಭಾಷೆಯ ಸಮೃದ್ಧಿಗಾಗಿ ಹೊಸ ಹೊಸ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಅವುಗಳನ್ನು ಜನರಿಗೆ ತಲುಪಿಸಲು ಯೋಜನೆಗಳನ್ನು ರೂಪಿಸಿಕೊಳ್ಳಲಾಗುತ್ತದೆ. ಆದರೆ, ಅವು ಎಚ್ಚರಮಟ್ಟಿಗೆ ಕನ್ನಡಿಗರ ಮೇಲೆ ಪರಿಣಾಮ ಬೀರುತ್ತಿವೆಯೋ ತಿಳಿಯದು.

ಇತ್ತೀಚೆಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರದಲ್ಲಿಯೂ ಭಾರಿ ವಿರೋಧಗಳು ಕೇಳಿಬಂದಿದ್ದವು. ಹೀಗೆ ಅನ್ಯಭಾಷೆಗಳ ಹಾವಳಿಯ ನಡುವೆ ಕರ್ನಾಟಕದಲ್ಲಿಯೇ ಕನ್ನಡ ಭಾಷೆಯ ಉಳಿವಿಗಾಗಿ ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನೂರಾರು ಕೋಟಿ ರೂ. ವ್ಯಯಿಸಿ ಮಾಡುವ ಇಂತಹ ಸಾಹಿತ್ಯ ಸಮ್ಮೇಳನಗಳಿಂದ ಕನ್ನಡನಾಡಿಗೆ ಏನಾದರೂ ಪ್ರಯೋಜನವಾಗು ವಂತಾಗಲಿ.

-ಜಾಕೀರ್ ಖಾನ್, ಸಾತಗಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago