ಓದುಗರ ಪತ್ರ
ಮೈಸೂರಿನ ಮುಖ್ಯ ಅಂಚೆ ಕಚೇರಿಯ ಸ್ಪೀಡ್ಪೋಸ್ಟ್ ವಿಭಾಗದಲ್ಲಿರುವ ಕೆಲವು ಸಿಬ್ಬಂದಿ ಗ್ರಾಹಕರೊಂದಿಗೆ ಸರಿಯಾಗಿ ಸ್ಪಂದಿಸದೆ ಬೇಜವಾಬ್ದಾರಿ ತೋರುತ್ತಿದ್ದಾರೆ. ಕೆಲವು ಕೌಂಟರ್ಗಳಲ್ಲಿ ಸಿಬ್ಬಂದಿ ಕೆಲಸಕ್ಕೆ ತಡವಾಗಿ ಹಾಜರಾಗುವುದಲ್ಲದೆ, ಕೆಲಸಕ್ಕೆ ಹಾಜರಾದ ಮೇಲೂ ತಮ್ಮ ವೈಯಕ್ತಿಕ ಕೆಲಸಗಳನ್ನು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತಿರುವ ಗ್ರಾಹಕರನ್ನೂ ಲೆಕ್ಕಿಸದೆ ತಮ್ಮ ವೈಯಕ್ತಿಕ ಕೆಲಸಗಳನ್ನು ಮುಗಿಸಿ ನಂತರ ಗ್ರಾಹಕರ ಬಳಿಗೆ ಸಿಬ್ಬಂದಿ ಬರುತ್ತಾರೆ. ಇದನ್ನು ಪ್ರಶ್ನಿಸುವ ಗ್ರಾಹಕರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅಲ್ಲದೆ ಕಚೇರಿಯ ಕೆಲಸಗಳಿವೆ ಎಂದು ಸಬೂಬು ನೀಡುತ್ತಾರೆ. ಮೊಬೈಲ್ ನೋಡಿಕೊಂಡು ಕಾಲಹರಣ ಮಾಡುತ್ತಾರೆ. ಹೀಗಾದರೆ ಸರತಿ ಸಾಲಿನಲ್ಲಿ ಕಾದು ನಿಲ್ಲುವ ಗ್ರಾಹಕರ ಪಾಡು ಏನಾಗಬೇಕು? ತಾವು ಇರುವುದು ಸಾರ್ವಜನಿಕ ಸೇವೆಗಾಗಿ ಎಂಬುದನ್ನೇ ಮರೆತು ಬೇಜವಾಬ್ದಾರಿ ತೋರುವ ಇಂತಹ ಸಿಬ್ಬಂದಿಯ ವಿರುದ್ಧ ಸರ್ಕಾರ ಕ್ರಮ ಕೈಗೊಂಡು, ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…