ಓದುಗರ ಪತ್ರ
ಮೈಸೂರಿನ ಮುಖ್ಯ ಅಂಚೆ ಕಚೇರಿಯ ಸ್ಪೀಡ್ಪೋಸ್ಟ್ ವಿಭಾಗದಲ್ಲಿರುವ ಕೆಲವು ಸಿಬ್ಬಂದಿ ಗ್ರಾಹಕರೊಂದಿಗೆ ಸರಿಯಾಗಿ ಸ್ಪಂದಿಸದೆ ಬೇಜವಾಬ್ದಾರಿ ತೋರುತ್ತಿದ್ದಾರೆ. ಕೆಲವು ಕೌಂಟರ್ಗಳಲ್ಲಿ ಸಿಬ್ಬಂದಿ ಕೆಲಸಕ್ಕೆ ತಡವಾಗಿ ಹಾಜರಾಗುವುದಲ್ಲದೆ, ಕೆಲಸಕ್ಕೆ ಹಾಜರಾದ ಮೇಲೂ ತಮ್ಮ ವೈಯಕ್ತಿಕ ಕೆಲಸಗಳನ್ನು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತಿರುವ ಗ್ರಾಹಕರನ್ನೂ ಲೆಕ್ಕಿಸದೆ ತಮ್ಮ ವೈಯಕ್ತಿಕ ಕೆಲಸಗಳನ್ನು ಮುಗಿಸಿ ನಂತರ ಗ್ರಾಹಕರ ಬಳಿಗೆ ಸಿಬ್ಬಂದಿ ಬರುತ್ತಾರೆ. ಇದನ್ನು ಪ್ರಶ್ನಿಸುವ ಗ್ರಾಹಕರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅಲ್ಲದೆ ಕಚೇರಿಯ ಕೆಲಸಗಳಿವೆ ಎಂದು ಸಬೂಬು ನೀಡುತ್ತಾರೆ. ಮೊಬೈಲ್ ನೋಡಿಕೊಂಡು ಕಾಲಹರಣ ಮಾಡುತ್ತಾರೆ. ಹೀಗಾದರೆ ಸರತಿ ಸಾಲಿನಲ್ಲಿ ಕಾದು ನಿಲ್ಲುವ ಗ್ರಾಹಕರ ಪಾಡು ಏನಾಗಬೇಕು? ತಾವು ಇರುವುದು ಸಾರ್ವಜನಿಕ ಸೇವೆಗಾಗಿ ಎಂಬುದನ್ನೇ ಮರೆತು ಬೇಜವಾಬ್ದಾರಿ ತೋರುವ ಇಂತಹ ಸಿಬ್ಬಂದಿಯ ವಿರುದ್ಧ ಸರ್ಕಾರ ಕ್ರಮ ಕೈಗೊಂಡು, ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…