Andolana originals

ಓದುಗರ ಪತ್ರ: ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವುದನ್ನು ಕಲಿಯಲಿ

ಮೈಸೂರಿನ ಮುಖ್ಯ ಅಂಚೆ ಕಚೇರಿಯ ಸ್ಪೀಡ್‌ಪೋಸ್ಟ್ ವಿಭಾಗದಲ್ಲಿರುವ ಕೆಲವು ಸಿಬ್ಬಂದಿ ಗ್ರಾಹಕರೊಂದಿಗೆ ಸರಿಯಾಗಿ ಸ್ಪಂದಿಸದೆ ಬೇಜವಾಬ್ದಾರಿ ತೋರುತ್ತಿದ್ದಾರೆ. ಕೆಲವು ಕೌಂಟರ್‌ಗಳಲ್ಲಿ ಸಿಬ್ಬಂದಿ ಕೆಲಸಕ್ಕೆ ತಡವಾಗಿ ಹಾಜರಾಗುವುದಲ್ಲದೆ, ಕೆಲಸಕ್ಕೆ ಹಾಜರಾದ ಮೇಲೂ ತಮ್ಮ ವೈಯಕ್ತಿಕ ಕೆಲಸಗಳನ್ನು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತಿರುವ ಗ್ರಾಹಕರನ್ನೂ ಲೆಕ್ಕಿಸದೆ ತಮ್ಮ ವೈಯಕ್ತಿಕ ಕೆಲಸಗಳನ್ನು ಮುಗಿಸಿ ನಂತರ ಗ್ರಾಹಕರ ಬಳಿಗೆ ಸಿಬ್ಬಂದಿ ಬರುತ್ತಾರೆ. ಇದನ್ನು ಪ್ರಶ್ನಿಸುವ ಗ್ರಾಹಕರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅಲ್ಲದೆ ಕಚೇರಿಯ ಕೆಲಸಗಳಿವೆ ಎಂದು ಸಬೂಬು ನೀಡುತ್ತಾರೆ. ಮೊಬೈಲ್ ನೋಡಿಕೊಂಡು ಕಾಲಹರಣ ಮಾಡುತ್ತಾರೆ. ಹೀಗಾದರೆ ಸರತಿ ಸಾಲಿನಲ್ಲಿ ಕಾದು ನಿಲ್ಲುವ ಗ್ರಾಹಕರ ಪಾಡು ಏನಾಗಬೇಕು? ತಾವು ಇರುವುದು ಸಾರ್ವಜನಿಕ ಸೇವೆಗಾಗಿ ಎಂಬುದನ್ನೇ ಮರೆತು ಬೇಜವಾಬ್ದಾರಿ ತೋರುವ ಇಂತಹ ಸಿಬ್ಬಂದಿಯ ವಿರುದ್ಧ ಸರ್ಕಾರ ಕ್ರಮ ಕೈಗೊಂಡು, ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

12 mins ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

1 hour ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

2 hours ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

2 hours ago

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

4 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

5 hours ago