ಓದುಗರ ಪತ್ರ
ಮೈಸೂರಿನ ಮುಖ್ಯ ಅಂಚೆ ಕಚೇರಿಯ ಸ್ಪೀಡ್ಪೋಸ್ಟ್ ವಿಭಾಗದಲ್ಲಿರುವ ಕೆಲವು ಸಿಬ್ಬಂದಿ ಗ್ರಾಹಕರೊಂದಿಗೆ ಸರಿಯಾಗಿ ಸ್ಪಂದಿಸದೆ ಬೇಜವಾಬ್ದಾರಿ ತೋರುತ್ತಿದ್ದಾರೆ. ಕೆಲವು ಕೌಂಟರ್ಗಳಲ್ಲಿ ಸಿಬ್ಬಂದಿ ಕೆಲಸಕ್ಕೆ ತಡವಾಗಿ ಹಾಜರಾಗುವುದಲ್ಲದೆ, ಕೆಲಸಕ್ಕೆ ಹಾಜರಾದ ಮೇಲೂ ತಮ್ಮ ವೈಯಕ್ತಿಕ ಕೆಲಸಗಳನ್ನು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತಿರುವ ಗ್ರಾಹಕರನ್ನೂ ಲೆಕ್ಕಿಸದೆ ತಮ್ಮ ವೈಯಕ್ತಿಕ ಕೆಲಸಗಳನ್ನು ಮುಗಿಸಿ ನಂತರ ಗ್ರಾಹಕರ ಬಳಿಗೆ ಸಿಬ್ಬಂದಿ ಬರುತ್ತಾರೆ. ಇದನ್ನು ಪ್ರಶ್ನಿಸುವ ಗ್ರಾಹಕರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅಲ್ಲದೆ ಕಚೇರಿಯ ಕೆಲಸಗಳಿವೆ ಎಂದು ಸಬೂಬು ನೀಡುತ್ತಾರೆ. ಮೊಬೈಲ್ ನೋಡಿಕೊಂಡು ಕಾಲಹರಣ ಮಾಡುತ್ತಾರೆ. ಹೀಗಾದರೆ ಸರತಿ ಸಾಲಿನಲ್ಲಿ ಕಾದು ನಿಲ್ಲುವ ಗ್ರಾಹಕರ ಪಾಡು ಏನಾಗಬೇಕು? ತಾವು ಇರುವುದು ಸಾರ್ವಜನಿಕ ಸೇವೆಗಾಗಿ ಎಂಬುದನ್ನೇ ಮರೆತು ಬೇಜವಾಬ್ದಾರಿ ತೋರುವ ಇಂತಹ ಸಿಬ್ಬಂದಿಯ ವಿರುದ್ಧ ಸರ್ಕಾರ ಕ್ರಮ ಕೈಗೊಂಡು, ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…