ಓದುಗರ ಪತ್ರ
ಮೈಸೂರಿನ ರಾಮಸ್ವಾಮಿ ವೃತ್ತದ ಮೂಲಕ ಪ್ರತಿನಿತ್ಯ ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಸಾವಿರಾರು ಜನರು ನಗರ ಸಾರಿಗೆ ಬಸ್ಗಳ ಮೂಲಕ ಸಂಚರಿಸುತ್ತಾರೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವ ಬಹುತೇಕ ಬಸ್ಗಳ ಚಾಲಕರು ಇಲ್ಲಿನ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡದೆ ಹಾಗೆಯೇ ಹೋಗುತ್ತಾರೆ.
ರಾಮಸ್ವಾಮಿ ವೃತ್ತದ ಮೂಲಕ ಸಂಚರಿಸುವ ಬಹುತೇಕ ಬಸ್ಗಳು ನಿಲುಗಡೆಯಾಗದೇ ಇರುವುದರಿಂದ ಸಿಟಿ ಬಸ್ ನಿಲ್ದಾಣ, ಗ್ರಾಮಾಂತರ ಬಸ್ ನಿಲ್ದಾಣಕ್ಕೆ ತೆರಳಲು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ಮಹಾರಾಜ ಕಾಲೇಜು, ಯುವರಾಜ ಕಾಲೇಜು, ಸದ್ವಿದ್ಯಾ ಕಾಲೇಜು, ಮರಿಮಲ್ಲಪ್ಪ ಕಾಲೇಜು , ಮಹಾರಾಣಿ ಕಾಲೇಜು, ಹಾರ್ಡ್ವಿಕ್ ಕಾಲೇಜು ಸೇರಿದಂತೆ ವಿವಿಧ ಶಾಲಾ ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳು ಬಸ್ ಇಲ್ಲದೇ ಪರಿತಪಿಸುವಂತಾಗಿದೆ. ಮಧ್ಯಾಹ್ನ ೩ರಿಂದ ಸಂಜೆ ೫ರವರೆಗೂ ಈ ಮಾರ್ಗದಲ್ಲಿ ಸಂಚರಿಸುವ ಬಹುತೇಕ ಬಸ್ಗಳನ್ನು ನಿಲ್ಲಿಸುವುದೇ ಇಲ್ಲ.
ಈ ಬಗ್ಗೆ ಮೈಸೂರು ನಗರ ಸಾರಿಗೆ ವಿಭಾಗೀಯ ನಿಯಂತ್ರಕರಿಗೆ ದೂರು ನೀಡಿದರೆ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು, ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಹೇಳುತ್ತಾರೆಯೇ ಹೊರತು, ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಸಂಬಂಧಪಟ್ಟವರು ಈಗಲಾದರೂ ರಾಮಸ್ವಾಮಿ ವೃತ್ತದ ಬಸ್ ನಿಲ್ದಾಣದಲ್ಲಿ ಪ್ರತಿಯೊಂದು ನಗರ ಸಾರಿಗೆ ಬಸ್ಸನ್ನೂ ನಿಲುಗಡೆ ಮಾಡುವ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಅನಿರುದ್ಧ, ಮೈಸೂರು
.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…