ಓದುಗರ ಪತ್ರ
ಮೈಸೂರಿನ ರಾಮಸ್ವಾಮಿ ವೃತ್ತದ ಮೂಲಕ ಪ್ರತಿನಿತ್ಯ ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಸಾವಿರಾರು ಜನರು ನಗರ ಸಾರಿಗೆ ಬಸ್ಗಳ ಮೂಲಕ ಸಂಚರಿಸುತ್ತಾರೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವ ಬಹುತೇಕ ಬಸ್ಗಳ ಚಾಲಕರು ಇಲ್ಲಿನ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡದೆ ಹಾಗೆಯೇ ಹೋಗುತ್ತಾರೆ.
ರಾಮಸ್ವಾಮಿ ವೃತ್ತದ ಮೂಲಕ ಸಂಚರಿಸುವ ಬಹುತೇಕ ಬಸ್ಗಳು ನಿಲುಗಡೆಯಾಗದೇ ಇರುವುದರಿಂದ ಸಿಟಿ ಬಸ್ ನಿಲ್ದಾಣ, ಗ್ರಾಮಾಂತರ ಬಸ್ ನಿಲ್ದಾಣಕ್ಕೆ ತೆರಳಲು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ಮಹಾರಾಜ ಕಾಲೇಜು, ಯುವರಾಜ ಕಾಲೇಜು, ಸದ್ವಿದ್ಯಾ ಕಾಲೇಜು, ಮರಿಮಲ್ಲಪ್ಪ ಕಾಲೇಜು , ಮಹಾರಾಣಿ ಕಾಲೇಜು, ಹಾರ್ಡ್ವಿಕ್ ಕಾಲೇಜು ಸೇರಿದಂತೆ ವಿವಿಧ ಶಾಲಾ ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳು ಬಸ್ ಇಲ್ಲದೇ ಪರಿತಪಿಸುವಂತಾಗಿದೆ. ಮಧ್ಯಾಹ್ನ ೩ರಿಂದ ಸಂಜೆ ೫ರವರೆಗೂ ಈ ಮಾರ್ಗದಲ್ಲಿ ಸಂಚರಿಸುವ ಬಹುತೇಕ ಬಸ್ಗಳನ್ನು ನಿಲ್ಲಿಸುವುದೇ ಇಲ್ಲ.
ಈ ಬಗ್ಗೆ ಮೈಸೂರು ನಗರ ಸಾರಿಗೆ ವಿಭಾಗೀಯ ನಿಯಂತ್ರಕರಿಗೆ ದೂರು ನೀಡಿದರೆ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು, ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಹೇಳುತ್ತಾರೆಯೇ ಹೊರತು, ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಸಂಬಂಧಪಟ್ಟವರು ಈಗಲಾದರೂ ರಾಮಸ್ವಾಮಿ ವೃತ್ತದ ಬಸ್ ನಿಲ್ದಾಣದಲ್ಲಿ ಪ್ರತಿಯೊಂದು ನಗರ ಸಾರಿಗೆ ಬಸ್ಸನ್ನೂ ನಿಲುಗಡೆ ಮಾಡುವ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಅನಿರುದ್ಧ, ಮೈಸೂರು
.
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…
ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…
ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಈ ಬಾರಿಯ ರಾಜ್ಯ ವಿಧಾನಮಂಡಲ ಅಧಿವೇಶನ ನಾಡಿನ ಜನರಿಗೆ ರವಾನಿಸಿರುವ ಸಂದೇಶ ಏನು? ಇಂತಹದೊಂದು…