ಓದುಗರ ಪತ್ರ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ಹೆಚ್ಚಾಗಿದ್ದು, ಸಾಲಕ್ಕೆ ಹೆದರಿ ಜನರು ಮನೆಗಳನ್ನು ಬಿಟ್ಟು ಹೋಗಿರುವ ಪ್ರಕರಣಗಳು ವರದಿಯಾಗಿವೆ. ಮೈಕ್ರೋ ಫೈನಾನ್ಸ್ ಹಾವಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಯ ಮೂಲಕ ಹೊಸ ಕಾನೂನು ರೂಪಿಸಲು ನಿರ್ಧರಿಸಲಾಗಿದ್ದು, ನಿಯಮ ಬಾಹಿರವಾಗಿ ವಸೂಲಿ ಮಾಡುವವರ ವಿರುದ್ಧ ಕಾನೂನು ಕ್ರಮಜರುಗಿಸಲಾಗುವುದು ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಅಲ್ಲದೆ ಸಂಜೆ ೫ರ ನಂತರ ಸಾಲ ವಸೂಲಾತಿಗೆ ಹೋಗುವಂತಿಲ್ಲ, ಮೈಕ್ರೋ ಫೈನಾನ್ಸ್ ಕಂಪೆನಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸಂತ್ರಸ್ತರು ಪೊಲೀಸರಿಗೆ ದೂರು ನೀಡಬೇಕೆಂದು ಹೇಳಿದ್ದಾರೆ.
ಆದರೆ ಗ್ರಾಮೀಣ ಭಾಗದ ಸಾಕಷ್ಟು ನಿರುದ್ಯೋಗಿ ಯುವಕರು ತಾತ್ಕಾಲಿಕ ಉದ್ಯೋಗಕ್ಕಾಗಿ ಮೈಕ್ರೋ ಫೈನಾನ್ಸ್ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕಂಪೆನಿಯ ಆದೇಶದಂತೆ ಅವರು ವಸೂಲಾತಿ ಮಾಡುತ್ತಾರೆ. ಹೀಗಿರುವಾಗ ಸರ್ಕಾರ ವಸೂಲಾತಿ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದರೆ ಈ ಸಿಬ್ಬಂದಿಗಳು ಏನು ಮಾಡಬೇಕು? ವಸೂಲಾತಿಯಾಗದಿದ್ದಲ್ಲಿ ಕಂಪೆನಿಯ ಅಧಿಕಾರಿಗಳು ಒತ್ತಡ ಏರುತ್ತಾರೆ, ವಸೂಲಾತಿ ಮಾಡಲು ಹೋದರೆ ಜನರಿಂದ ಕಿರುಕುಳದ ಆರೋಪ ಎದುರಿಸಬೇಕಾಗಿದೆ. ಆದ್ದರಿಂದ ಸರ್ಕಾರ ಮೈಕ್ರೋ ಫೈನಾನ್ಸ್ ಕಂಪೆನಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ಬದಲು ನಿಯಮ ಬಾಹಿರವಾಗಿ ವಸೂಲಿ ಮಾಡಿ ಎಂದು ಸೂಚಿಸುವ ಕಂಪೆನಿಗಳ ಮುಖ್ಯಸ್ಥರ ವಿರುದ್ಧ ಕ್ರಮಕೈಗೊಳ್ಳಲಿ.
-ಮೋಹನ್ ಕುಮಾರ್, ಎಚ್.ಡಿ.ಕೋಟೆ ತಾ
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…