ಈ ಹಿಂದೆ ಮೈಸೂರಿನಿಂದ ಬೆಂಗಳೂರಿಗೆ ಪ್ರತಿದಿನ ರಾತ್ರಿ 12 ಗಂಟೆಗೆ ಪ್ಯಾಸೆಂಜರ್ ರೈಲು ಸಂಚರಿಸುತ್ತಿತ್ತು. ಆದರೆ ಕೊರೊನಾ ಸಂದರ್ಭದಲ್ಲಿ ಈ ರೈಲನ್ನು ಸ್ಥಗಿತಗೊಳಿಸಲಾಗಿತ್ತು.
ಈವರೆಗೂ ಸ್ಥಗಿತಗೊಳಿಸಲಾಗಿದ್ದ ರೈಲು ಸಂಚಾರ ಆರಂಭಗೊಳ್ಳದ ಇರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಸಾಮಾನ್ಯವಾಗಿ ದೂರದ ಊರಿಗೆ ರೈಲಿನಲ್ಲಿ ಪ್ರಯಾಣಿಸುವವರು ಹೆಚ್ಚಾಗಿ ರಾತ್ರಿ ವೇಳೆಯ ರೈಲುಗಳನ್ನೇ ಬಳಸುತ್ತಾರೆ. ಇದರಿಂದಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ರೈಲು ಸದಾ ಪ್ರಯಾಣಿಕರಿಂದ ತುಂಬಿಕೊಳ್ಳುತ್ತಿತ್ತು, ವಿವಿಧ ಕೆಲಸ ಕಾರ್ಯಗಳಿಗೆ ಬೆಂಗಳೂರಿಗೆ ಹೋಗಿ ಬರುತ್ತಿದ್ದ ಪ್ರಯಾಣಿಕರೂ ಇದೇ ರೈಲಿನಲ್ಲಿ ಸಂಚರಿಸುತ್ತಿದ್ದರು. ಆದರೆ ಕೊರೊನಾ ಬಳಿಕ ರೈಲು ಸಂಚಾರ ಸ್ಥಗತಿಗೊಂಡಿದ್ದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ರಾತ್ರಿ ವೇಳೆ ಸಂಚರಿಸುತ್ತಿದ್ದ ಮೈಸೂರು-ಬೆಂಗಳೂರು ಪ್ಯಾಸೆಂಜರ್ ರೈಲು ಮರಳಿ ಕಾರ್ಯಾರಂಭ ಮಾಡುವಂತೆ ಮಾಡಬೇಕಿದೆ.
-ಚಂದ್ರಶೇಖರ, ಅನಿಲರಾಜ, ಸುರೇಶ, ರಶ್ಮಿ, ಸುಜಾತ, ಜಾನಕಿ, ಸರೋಜ, ಸತೀಶ, ಚಕ್ರಪಾಣಿ, ಜಯಲಕ್ಷ್ಮೀಪುರಂ, ಮೈಸೂರು.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…