ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಯುವ ದಸರಾ ಕಾರ್ಯಕ್ರಮ ಹೆಚ್ಚು ಜನಪ್ರಿಯತೆಯನ್ನು ಹೊಂದಿದ್ದು, ಸಾವಿರಾರು ಮಂದಿ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಬರುತ್ತಾರೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರೂ ಯುವ ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಾರೆ. ಆದರೆ ಜಿಲ್ಲಾಡಳಿತ ಈ ಬಾರಿಯ ಯುವ ದಸರಾ ಕಾರ್ಯಕ್ರಮವನ್ನು ನಗರದ ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಲು ತೀರ್ಮಾನಿಸಿದ್ದು, ಈ ವರ್ಗದವರು ಅಲ್ಲಿಗೆ ಬಂದು ಕಾರ್ಯಕ್ರಮವನ್ನು ವೀಕ್ಷಿಸಲು ಕಷ್ಟವಾಗಲಿದೆ. ಅಲ್ಲದೆ ಕಾರ್ಯಕ್ರಮ ರಾತ್ರಿಯ ವೇಳೆ ನಡೆಯುವುದರಿಂದ ಹೆಣ್ಣು ಮಕ್ಕಳು ಅಷ್ಟು ದೂರ ಬರಲು ಭಯಪಡುವಂತಾಗಿದೆ. ಇನ್ನು ಕಾರ್ಯಕ್ರಮ ನಗರದ ಹೊರವಲಯದಲ್ಲಿ ನಡೆಯುವುದರಿಂದ ಸಂತ ಸ್ವಂತ ವಾಹನಗಳನ್ನು ಹೊಂದಿರುವವರು ಸುರಕಿತವಾಗಿ ಬಂದು ಹೋಗಬಹುದು. ಆದರೆ, ವಾಹನಗಳಿಲ್ಲದಿರುವವರು ಕಾರ್ಯಕ್ರಮಕ್ಕೆ ಹೋಗಿ ನಡುರಾತ್ರಿಯಲ್ಲಿ ವಾಪಸ್ ಮನೆಗೆ ಬರುವುದಾದರೂ ಹೇಗೆ? ಜಿಲ್ಲಾಡಳಿತ ಇವೆಲ್ಲದರ ಬಗ್ಗೆ ಯೋಚಿಸಿ ಪರ್ಯಾಯ ವ್ಯವಸ್ಥೆಗಳನ್ನು ಮಾಡುವುದಾದರೆ ಮಾತ್ರ ಹೊರ ವಲಯದಲ್ಲಿ ಕಾರ್ಯಕ್ರಮ ಆಯೋಜಿಸಲಿ. ಇಲ್ಲವಾದಲ್ಲಿ ಎಂದಿನಂತೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಲಿ.
–ಪ್ರಿಯಾಂಕ, ಆರ್.ಎಸ್.ನಾಯ್ಡು ನಗರ, ಮೈಸೂರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…