ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಿ ತಮ್ಮ ಪಕ್ಷದ ನಿಲುವನ್ನು ಪ್ರಸ್ತಾಪಿಸಬಹುದಿತ್ತು. ಆದರೆ ಅವರು ಸಭೆಯಲ್ಲಿ ಭಾಗಿಯಾಗದೆ ಮಾಧ್ಯಮಗಳ ಮುಂದೆ ‘ನಾನು ಗೋಡಂಬಿ, ದ್ರಾಕ್ಷಿತಿನ್ನಲುಸಭೆಗೆ ಹೋಗಬೇಕಿತ್ತಾ?’ ಎಂದು ವ್ಯಂಗ್ಯವಾಡಿರುವುದು ಸಮಂಜಸವಲ್ಲ. ನೆಲ, ಜಲ, ಭಾಷೆಯ ವಿಚಾರದಲ್ಲಿ ಧಕ್ಕೆಯಾದಾಗ ರಾಜ್ಯದ ಹಿತ ಕಾಯಲು ಎಲ್ಲ ರಾಜಕೀಯ ಪಕ್ಷಗಳ ನಾಯಕರೂ ಒಟ್ಟಾಗಿ ಶ್ರಮಿಸಬೇಕು.
ಹಿಂದೆ ಕೇಂದ್ರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್ ಅವರು ಕಾವೇರಿ ನೀರಿನ ವಿಚಾರ ಬಂದಾಗ ಪಕ್ಷ ಭೇದ ಮರೆತು ರಾಜ್ಯದ ಹಿತಾಸಕ್ತಿಗಾಗಿ ಮುತುವರ್ಜಿ ವಹಿಸಿದ್ದರು. ಅವರಂತೆ ಅನೇಕ ನಾಯಕರು ರಾಜ್ಯದ ಹಿತಕ್ಕಾಗಿ ಒಟ್ಟಾಗಿ ಶ್ರಮಿಸಿದ್ದಾರೆ. ಆದ್ದರಿಂದ ಈಗಿರುವ ನಾಯಕರೂ ಅವರಂತೆಯೇ ಒಂದಾಗಿ ಹೋರಾಡಬೇಕೇ ವಿನಾ ಪಕ್ಷಭೇದ ಮಾಡಿಕೊಂಡು ಪಲಾಯನ ಮಾಡಬಾರದು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…