Andolana originals

ಓದುಗರ ಪತ್ರ| ರಾಜ್ಯದ ಹಿತಕ್ಕಾಗಿ ಎಲ್ಲರೂ ಒಂದಾಗಿ ಹೋರಾಡಿ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಿ ತಮ್ಮ ಪಕ್ಷದ ನಿಲುವನ್ನು ಪ್ರಸ್ತಾಪಿಸಬಹುದಿತ್ತು. ಆದರೆ ಅವರು ಸಭೆಯಲ್ಲಿ ಭಾಗಿಯಾಗದೆ ಮಾಧ್ಯಮಗಳ ಮುಂದೆ ‘ನಾನು ಗೋಡಂಬಿ, ದ್ರಾಕ್ಷಿತಿನ್ನಲುಸಭೆಗೆ ಹೋಗಬೇಕಿತ್ತಾ?’ ಎಂದು ವ್ಯಂಗ್ಯವಾಡಿರುವುದು ಸಮಂಜಸವಲ್ಲ. ನೆಲ, ಜಲ, ಭಾಷೆಯ ವಿಚಾರದಲ್ಲಿ ಧಕ್ಕೆಯಾದಾಗ ರಾಜ್ಯದ ಹಿತ ಕಾಯಲು ಎಲ್ಲ ರಾಜಕೀಯ ಪಕ್ಷಗಳ ನಾಯಕರೂ ಒಟ್ಟಾಗಿ ಶ್ರಮಿಸಬೇಕು.

ಹಿಂದೆ ಕೇಂದ್ರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್‌ ಅವರು ಕಾವೇರಿ ನೀರಿನ ವಿಚಾರ ಬಂದಾಗ ಪಕ್ಷ ಭೇದ ಮರೆತು ರಾಜ್ಯದ ಹಿತಾಸಕ್ತಿಗಾಗಿ ಮುತುವರ್ಜಿ ವಹಿಸಿದ್ದರು. ಅವರಂತೆ ಅನೇಕ ನಾಯಕರು ರಾಜ್ಯದ ಹಿತಕ್ಕಾಗಿ ಒಟ್ಟಾಗಿ ಶ್ರಮಿಸಿದ್ದಾರೆ. ಆದ್ದರಿಂದ ಈಗಿರುವ ನಾಯಕರೂ ಅವರಂತೆಯೇ ಒಂದಾಗಿ ಹೋರಾಡಬೇಕೇ ವಿನಾ ಪಕ್ಷಭೇದ ಮಾಡಿಕೊಂಡು ಪಲಾಯನ ಮಾಡಬಾರದು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

3 mins ago

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

23 mins ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

34 mins ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago