ಓದುಗರ ಪತ್ರ
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ ದಿನೇ ಹೆಚ್ಚುತ್ತಿದೆ. ಯಾರೂ ಕೂಡ ಸೋಲುವಂತೆಯೂ ಕಾಣುತ್ತಿಲ್ಲ. ಈ ಕಠಿಣ ಸನ್ನಿವೇಶದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿ ದಿನವೂ ಗೊಂದಲಮಯ ಹೇಳಿಕೆ ಗಳನ್ನು ನೀಡುತ್ತಿದ್ದಾರೆ. ಅಂತರ ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ವರ್ಚ ಸ್ಸನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿ ನಾಯಕರುಗಳು ಯುದ್ಧಗಳನ್ನು ಅನಿವಾರ್ಯವಾಗಿಸುತ್ತಿರುವುದು ವಿಪರ್ಯಾಸ.
ಉಭಯ ದೇಶಗಳ ನಾಯಕರ ಸ್ವ ಪ್ರತಿಷ್ಠೆ ಮತ್ತು ಅಹಂಕಾರದಿಂದ ಮುಂದುವರಿಯುತ್ತಿರುವ ಈ ಯುದ್ಧವು ಸಂಕಷ್ಟದ ಹಾದಿಯಾಗಿದೆ. ಶಾಂತಿ ಮತ್ತು ಸಂಧಾನದ ಬದಲಿಗೆ ಅಹಂಕಾರಕ್ಕೆ ಮನ್ನಣೆ ನೀಡಿರುವುದ ರಿಂದ ಯುದ್ಧಗಳು ದೀರ್ಘಕಾಲದವರೆಗೆ ಮುಂದುವರಿಯುತ್ತಿವೆ. ಈ ಯುದ್ಧವು ಅನೇಕ ಅಮಾಯಕ ಜೀವಿಗಳೂ ಸೇರಿದಂತೆ ಜಗತ್ತಿನ ಆರ್ಥಿಕತೆ ಮತ್ತು ಮೂಲ ಸೌಕರ್ಯಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಬಡವರು, ಮಹಿಳೆಯರು, ವೃದ್ಧರು ಮತ್ತು ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಇಡೀ ಪ್ರಪಂಚದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಸ್ಥಿರತೆ ಉಂಟಾಗುತ್ತಿದೆ.
ಯುದ್ಧವು ಎಂದಿಗೂ ಶಾಶ್ವತ ಪರಿಹಾರವಲ್ಲ. ಬದಲಾಗಿ ಮಾತುಕತೆ ಮತ್ತು ಸೌಹಾರ್ದತೆಯಿಂದ ಮಾತ್ರ ಶಾಂತಿ, ಸಾಮರಸ್ಯ ಸಾಧ್ಯ. ಈ ನಿಟ್ಟಿನಲ್ಲಿ ಯುದ್ಧೋನ್ಮಾದವನ್ನು ತೋರುತ್ತಿರುವ ನಾಯಕರುಗಳು ಯುದ್ಧಮಂತ್ರವನ್ನು ಪಠಿಸುವುದನ್ನು ಬಿಟ್ಟರೆ ತಮ್ಮ ತಮ್ಮ ದೇಶದ ಜನರಿಗೆ ಹಾಗೂ ಜಗತ್ತಿಗೆ ಮಹದುಪಕಾರ ಮಾಡಿದಂತೆ ಹಾಗೂ ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಉಂಟಾಗುತ್ತಿರುವ ಘನಘೋರ ಪರಿಣಾಮಗಳನ್ನು ತಡೆಗಟ್ಟಿದಂತಾಗುತ್ತದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…