Andolana originals

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ ಬದಿಯ ಅಂಗಡಿಗಳಿಗೆ ಹೋದಾಗ ವಾಹನ ನಿಲ್ಲಿಸಲು ಒಂದು ಮರದ ನೆರಳಿಗಾಗಿ ಹುಡುಕಾಡಬೇಕಾದ ಪರಿಸ್ಥಿತಿ ಇದೆ. ಅಪ್ಪಿತಪ್ಪಿ ಬಿಸಿಲಿನಲ್ಲಿ ಬೈಕ್ ಅಥವಾ ಸ್ಕೂಟರ್‌ಗಳನ್ನು ನಿಲ್ಲಿಸಿದರೆ ಸೀಟುಗಳು ಕಾದ ಹೆಂಚಿನಂತಾಗಿ, ಅದರ ಮೇಲೆ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ.

ಬಿಸಿಲಿನ ತಾಪಕ್ಕೆ ನಮ್ಮ ಚರ್ಮದ ಬಣ್ಣವೂ ಕಪ್ಪಾಗುತ್ತಿದೆ. ನಾವು ಇಂದು ನೆರಳಿನಲ್ಲಿ ನಿಂತು ಉಸಿರಾಡುತ್ತಿದ್ದೇವೆ ಎಂದರೆ, ಅದಕ್ಕೆ ಅಂದು ಯಾರೋ ಹಿರಿಯರು ನೆಟ್ಟು ಬೆಳೆಸಿದ ಮರಗಳೇ ಕಾರಣ. ಆದರೆ ಇಂದು ನಾವು ಯಾರೋ ಗಿಡ ನೆಡುತ್ತಾರೆ, ಸರ್ಕಾರ ನೋಡಿಕೊಳ್ಳುತ್ತದೆ ಎಂದು ಗಿಡ ನೆಟ್ಟು ಪರಿಸರ ಉಳಿಸುವ ಕರ್ತವ್ಯ ಮರೆತರೆ ಮುಂದಿನ ಪೀಳಿಗೆಗೆ ಕೇವಲ ಕಾಂಕ್ರೀಟ್ ಕಾಡು ಮಾತ್ರ ಉಳಿಯುತ್ತದೆ.

ಈ ಪರಿಸ್ಥಿತಿ ಬದಲಾಗಬೇಕಾದರೆ ಪ್ರತಿಯೊಬ್ಬರೂ ಸೂಕ್ತವಾದ ಜಾಗದಲ್ಲಿ ಕನಿಷ್ಠ ಒಂದೊಂದು ಗಿಡವನ್ನುನೆಟ್ಟು ಜವಾಬ್ದಾರಿಯಿಂದ ಪೋಷಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ನಮಗೂ ನೆರಳು ಸಿಗುತ್ತದೆ, ನಮ್ಮ ಮಕ್ಕಳ ಭವಿಷ್ಯಕ್ಕೂ ದಾರಿಯಾಗುತ್ತದೆ. ಪ್ರಕೃತಿಯನ್ನು ರಕ್ಷಿಸುವ ಈ ಕಾರ್ಯ ನಮ್ಮಿಂದಲೇ ಶುರುವಾಗಲಿ.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

3 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

3 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

4 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

9 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

12 hours ago