Andolana originals

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ ಬದಿಯ ಅಂಗಡಿಗಳಿಗೆ ಹೋದಾಗ ವಾಹನ ನಿಲ್ಲಿಸಲು ಒಂದು ಮರದ ನೆರಳಿಗಾಗಿ ಹುಡುಕಾಡಬೇಕಾದ ಪರಿಸ್ಥಿತಿ ಇದೆ. ಅಪ್ಪಿತಪ್ಪಿ ಬಿಸಿಲಿನಲ್ಲಿ ಬೈಕ್ ಅಥವಾ ಸ್ಕೂಟರ್‌ಗಳನ್ನು ನಿಲ್ಲಿಸಿದರೆ ಸೀಟುಗಳು ಕಾದ ಹೆಂಚಿನಂತಾಗಿ, ಅದರ ಮೇಲೆ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ.

ಬಿಸಿಲಿನ ತಾಪಕ್ಕೆ ನಮ್ಮ ಚರ್ಮದ ಬಣ್ಣವೂ ಕಪ್ಪಾಗುತ್ತಿದೆ. ನಾವು ಇಂದು ನೆರಳಿನಲ್ಲಿ ನಿಂತು ಉಸಿರಾಡುತ್ತಿದ್ದೇವೆ ಎಂದರೆ, ಅದಕ್ಕೆ ಅಂದು ಯಾರೋ ಹಿರಿಯರು ನೆಟ್ಟು ಬೆಳೆಸಿದ ಮರಗಳೇ ಕಾರಣ. ಆದರೆ ಇಂದು ನಾವು ಯಾರೋ ಗಿಡ ನೆಡುತ್ತಾರೆ, ಸರ್ಕಾರ ನೋಡಿಕೊಳ್ಳುತ್ತದೆ ಎಂದು ಗಿಡ ನೆಟ್ಟು ಪರಿಸರ ಉಳಿಸುವ ಕರ್ತವ್ಯ ಮರೆತರೆ ಮುಂದಿನ ಪೀಳಿಗೆಗೆ ಕೇವಲ ಕಾಂಕ್ರೀಟ್ ಕಾಡು ಮಾತ್ರ ಉಳಿಯುತ್ತದೆ.

ಈ ಪರಿಸ್ಥಿತಿ ಬದಲಾಗಬೇಕಾದರೆ ಪ್ರತಿಯೊಬ್ಬರೂ ಸೂಕ್ತವಾದ ಜಾಗದಲ್ಲಿ ಕನಿಷ್ಠ ಒಂದೊಂದು ಗಿಡವನ್ನುನೆಟ್ಟು ಜವಾಬ್ದಾರಿಯಿಂದ ಪೋಷಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ನಮಗೂ ನೆರಳು ಸಿಗುತ್ತದೆ, ನಮ್ಮ ಮಕ್ಕಳ ಭವಿಷ್ಯಕ್ಕೂ ದಾರಿಯಾಗುತ್ತದೆ. ಪ್ರಕೃತಿಯನ್ನು ರಕ್ಷಿಸುವ ಈ ಕಾರ್ಯ ನಮ್ಮಿಂದಲೇ ಶುರುವಾಗಲಿ.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

47 mins ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

48 mins ago

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…

50 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ರಮಣ್ ಕಿಶೋರ್ ಎಂಬ ‘ಗಾಂವ್ ಕಾ ಡಾಕ್ಟರ್’

ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…

52 mins ago

ದೇವಸ್ಥಾನಗಳ ಅಭಿವೃದ್ಧಿಗೆ ಧಾರ್ಮಿಕ ಪ್ರವಾಸೋದ್ಯಮ ವರದಾನ

ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…

55 mins ago

ಮಂಡ್ಯ ಜಿಲ್ಲೆಯ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…

60 mins ago