Andolana originals

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ ಚಾನಲ್‌ಗಳು, ಇ-ಪುಸ್ತಕಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿಗಳು ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಲಭವಾಗಿ ಲಭ್ಯವಾಗಿದ್ದು, ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಗಿದೆ.

ಈ ತಂತ್ರಜ್ಞಾನದಿಂದ ಸಾವಿರಾರು ಜನ ಯುವಕರು ಸ್ವ ಉದ್ಯೋಗದಿಂದ ಸ್ವಾವಲಂಬಿಗಳಾಗುತ್ತಿದ್ದಾರೆ. ಆದರೆ ಯುವಕರು ಹೆಚ್ಚು ಸಮಯ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕಳೆಯುತ್ತಿರುವುದರಿಂದ ತಲೆನೋವು, ನಿದ್ರಾಹೀನತೆ, ಮಾನಸಿಕ ಒತ್ತಡದಿಂದ ಬಳಲುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ಪರಾಮರ್ಶಿಸದೆ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಪ್ರತಿಕ್ರಿಯಿಸುವುದರಿಂದ ಅನೇಕ ಅನವಶ್ಯಕ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಯುವಕರು ಸಮಯ ಮಿತಿಯಲ್ಲಿ ಮೊಬೈಲ್ ಬಳಕೆ ಮಾಡಬೇಕು. ಶಿಕ್ಷಣ ಮತ್ತು ಜ್ಞಾನಾರ್ಜನೆಗೆ ಡಿಜಿಟಲ್ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು.

– ಎನ್.ಎಚ್.ಮನೋಜ್, ಪತ್ರಿಕೋದ್ಯಮ ಮತ್ತು ಸಂವಹನ ಸಮೂಹ ವಿಭಾಗ,ಮಾನಸ ಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್‌ ತನ್ನ ಆದೇಶ…

46 mins ago

ನಾನೇ ವೆನಿಜುವೆಲಾ ಹಂಗಾಮಿ ಅಧ್ಯಕ್ಷ: ಡೊನಾಲ್ಡ್‌ ಟ್ರಂಪ್‌ ಘೋಷಣೆ

ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು…

57 mins ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ಸಿಬಿಐ ಎದುರು ವಿಚಾರಣೆಗೆ ಹಾಜರಾದ ವಿಜಯ್‌

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ ಇಂದು ನವದೆಹಲಿಯಲ್ಲಿ…

1 hour ago

ಇಸ್ರೋಗೆ ಮತ್ತೊಂದು ಮೈಲಿಗಲ್ಲು: ನಭಕ್ಕೆ ಹಾರಿದ ಪಿಎಸ್‌ಎಲ್‌ವಿ ರಾಕೆಟ್‌

ಶ್ರೀಹರಿಕೋಟಾ: ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಪಿಎಸ್‌ಎಲ್‌ವಿ-C62 ರಾಕೆಟ್‌ ಮೂಲಕ EOS-N1 ಅನ್ವೇಷಾ ಸೇರಿದಂತೆ 16 ಉಪಗ್ರಹಗಳನ್ನು ಉಡಾವಣೆ ಮಾಡಿದೆ.…

2 hours ago

ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

3 hours ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ಆತಂಕ

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ…

3 hours ago