ಓದುಗರ ಪತ್ರ
ಕಳೆದ ಭಾನುವಾರ ಪ್ರಧಾನಿ ಮೋದಿಯವರು ಮನ್ ಕೀ ಬಾತ್ ಕಾರ್ಯ ಕ್ರಮದ ಮೂಲಕ ಜನರ ಸ್ಥೂಲಕಾಯ ಸಮಸ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿ ಅದಕ್ಕೆ ಪರಿಹಾರವನ್ನೂ ಸೂಚಿಸಿದ್ದಾರೆ. ಬೊಜ್ಜು ಸಮಸ್ಯೆಯ ಬಗ್ಗೆ ಮಾತನಾಡಿರುವ ಅವರು, ಮುಖ್ಯವಾಗಿ ಯುವ ಜನತೆಗೆ ಈ ಸ್ಥೂಲ ಕಾಯ ದಿಂದ ಆಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿರುವುದು ಶ್ಲಾಘನೀಯ. ದೃಶ್ಯ ಮಾಧ್ಯಮ ಬಂದ ನಂತರ ರೇಡಿಯೋ ಕೇಳುವುದರಿಂದ ದೂರಾಗಿದ್ದ ಜನರನ್ನು ಮತ್ತೆ ರೇಡಿಯೋ ಕೇಳುವಂತೆ ಮಾಡಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಯುವ ಸಮುದಾಯವನ್ನೊಳ ಗೊಂಡಂತೆ ದೇಶದ ಸರಾಸರಿ ಜನಸಂಖ್ಯೆಯ ೪ ಜನರಲ್ಲಿ ಒಬ್ಬರು ‘ಮಧುಮೇಹ‘ ಕಾಯಿಲೆಯಿಂದ ಬಳಲುತ್ತಿದ್ದು, ಆರೋಗ್ಯ ಇಲಾಖೆಯ ಅಂದಾಜಿನ ಪ್ರಕಾರ ೨೦೪೦ರ ವೇಳೆಗೆ, ಭಾರತ ಪ್ರಪಂಚದಲ್ಲೇ ಅತಿ ಹೆಚ್ಚು ಮಧುಮೇಹಿಗಳನ್ನು ಹೊಂದಿರುವ ದೇಶವಾಗಲಿದೆಯಂತೆ. ಆದ್ದರಿಂದ ಪ್ರಧಾನಿಯವರು ಮುಂದಿನ ದಿನಗಳಲ್ಲಿ ಮನ್ ಕೀ ಬಾತ್ ಮೂಲಕ ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಲಿ.
-ಬೂಕನಕೆರೆ ವಿಜೇಂದ್ರ,ಕುವೆಂಪುನಗರ, ಮೈಸೂರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…