ಓದುಗರ ಪತ್ರ
ಕಳೆದ ಭಾನುವಾರ ಪ್ರಧಾನಿ ಮೋದಿಯವರು ಮನ್ ಕೀ ಬಾತ್ ಕಾರ್ಯ ಕ್ರಮದ ಮೂಲಕ ಜನರ ಸ್ಥೂಲಕಾಯ ಸಮಸ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿ ಅದಕ್ಕೆ ಪರಿಹಾರವನ್ನೂ ಸೂಚಿಸಿದ್ದಾರೆ. ಬೊಜ್ಜು ಸಮಸ್ಯೆಯ ಬಗ್ಗೆ ಮಾತನಾಡಿರುವ ಅವರು, ಮುಖ್ಯವಾಗಿ ಯುವ ಜನತೆಗೆ ಈ ಸ್ಥೂಲ ಕಾಯ ದಿಂದ ಆಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿರುವುದು ಶ್ಲಾಘನೀಯ. ದೃಶ್ಯ ಮಾಧ್ಯಮ ಬಂದ ನಂತರ ರೇಡಿಯೋ ಕೇಳುವುದರಿಂದ ದೂರಾಗಿದ್ದ ಜನರನ್ನು ಮತ್ತೆ ರೇಡಿಯೋ ಕೇಳುವಂತೆ ಮಾಡಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಯುವ ಸಮುದಾಯವನ್ನೊಳ ಗೊಂಡಂತೆ ದೇಶದ ಸರಾಸರಿ ಜನಸಂಖ್ಯೆಯ ೪ ಜನರಲ್ಲಿ ಒಬ್ಬರು ‘ಮಧುಮೇಹ‘ ಕಾಯಿಲೆಯಿಂದ ಬಳಲುತ್ತಿದ್ದು, ಆರೋಗ್ಯ ಇಲಾಖೆಯ ಅಂದಾಜಿನ ಪ್ರಕಾರ ೨೦೪೦ರ ವೇಳೆಗೆ, ಭಾರತ ಪ್ರಪಂಚದಲ್ಲೇ ಅತಿ ಹೆಚ್ಚು ಮಧುಮೇಹಿಗಳನ್ನು ಹೊಂದಿರುವ ದೇಶವಾಗಲಿದೆಯಂತೆ. ಆದ್ದರಿಂದ ಪ್ರಧಾನಿಯವರು ಮುಂದಿನ ದಿನಗಳಲ್ಲಿ ಮನ್ ಕೀ ಬಾತ್ ಮೂಲಕ ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಲಿ.
-ಬೂಕನಕೆರೆ ವಿಜೇಂದ್ರ,ಕುವೆಂಪುನಗರ, ಮೈಸೂರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…