ಓದುಗರ ಪತ್ರ
ಕಳೆದ ಭಾನುವಾರ ಪ್ರಧಾನಿ ಮೋದಿಯವರು ಮನ್ ಕೀ ಬಾತ್ ಕಾರ್ಯ ಕ್ರಮದ ಮೂಲಕ ಜನರ ಸ್ಥೂಲಕಾಯ ಸಮಸ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿ ಅದಕ್ಕೆ ಪರಿಹಾರವನ್ನೂ ಸೂಚಿಸಿದ್ದಾರೆ. ಬೊಜ್ಜು ಸಮಸ್ಯೆಯ ಬಗ್ಗೆ ಮಾತನಾಡಿರುವ ಅವರು, ಮುಖ್ಯವಾಗಿ ಯುವ ಜನತೆಗೆ ಈ ಸ್ಥೂಲ ಕಾಯ ದಿಂದ ಆಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿರುವುದು ಶ್ಲಾಘನೀಯ. ದೃಶ್ಯ ಮಾಧ್ಯಮ ಬಂದ ನಂತರ ರೇಡಿಯೋ ಕೇಳುವುದರಿಂದ ದೂರಾಗಿದ್ದ ಜನರನ್ನು ಮತ್ತೆ ರೇಡಿಯೋ ಕೇಳುವಂತೆ ಮಾಡಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಯುವ ಸಮುದಾಯವನ್ನೊಳ ಗೊಂಡಂತೆ ದೇಶದ ಸರಾಸರಿ ಜನಸಂಖ್ಯೆಯ ೪ ಜನರಲ್ಲಿ ಒಬ್ಬರು ‘ಮಧುಮೇಹ‘ ಕಾಯಿಲೆಯಿಂದ ಬಳಲುತ್ತಿದ್ದು, ಆರೋಗ್ಯ ಇಲಾಖೆಯ ಅಂದಾಜಿನ ಪ್ರಕಾರ ೨೦೪೦ರ ವೇಳೆಗೆ, ಭಾರತ ಪ್ರಪಂಚದಲ್ಲೇ ಅತಿ ಹೆಚ್ಚು ಮಧುಮೇಹಿಗಳನ್ನು ಹೊಂದಿರುವ ದೇಶವಾಗಲಿದೆಯಂತೆ. ಆದ್ದರಿಂದ ಪ್ರಧಾನಿಯವರು ಮುಂದಿನ ದಿನಗಳಲ್ಲಿ ಮನ್ ಕೀ ಬಾತ್ ಮೂಲಕ ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಲಿ.
-ಬೂಕನಕೆರೆ ವಿಜೇಂದ್ರ,ಕುವೆಂಪುನಗರ, ಮೈಸೂರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…