Andolana originals

ಓದುಗರ ಪತ್ರ: ಸಂತ್ರಸ್ತೆಯರ ಅಳಲಿಗೆ ಕಿವಿಯಾಗೋಣ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯ ಬಗ್ಗೆ ಕುಹಕಗಳು ಕೇಳಿಬರುತ್ತಿವೆ. ಅದು ಸಲ್ಲದು. ಸಂತ್ರಸ್ತೆಯರು ಬಲವಂತವಾಗಿ ಪ್ರಜ್ವಲ್ ಅವರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿರಬಹುದು. ಅಥವಾ ಹಲವು ಚಪಲಕೋರರ ಅನಿಸಿಕೆಯಂತೆ ವಿಲಾಸಿ ಜೀವನಕ್ಕಾಗಿಯೇ ಜೀವನ ಹಾಳು ಮಾಡಿಕೊಂಡಿರಬಹುದು. ಈ ಎಲ್ಲದರ ಹಿಂದೆ ಪುರುಷನೊಬ್ಬನ ಪೈಶಾಚಿಕತೆ ಇದೆ ಎಂಬುದು ಸಾಬೀತಾಗಿದೆ. ಅಲ್ಲದೆ, ಅಶ್ಲೀಲ ಪೆನ್‌ಡೈವ್‌ನ್ನು ವಿಡಿಯೋ ಮೂಲಕ ಹರಿಯಬಿಟ್ಟವರು ಕೂಡ ಪುರುಷರೇ ಆಗಿರುತ್ತಾರೆ. ಸೇಡು, ಚಪಲ, ಕಳ್ಳದಂಧೆಗೆ ರಕ್ಷಣೆ ಇತ್ಯಾದಿ ಯಾವುದೇ ದುರುದ್ದೇಶ ಇರಬಹುದು. ಅದರಿಂದ ಅವಮಾನ, ಅಪಹಾಸ್ಯಕ್ಕೆ ಗುರಿಯಾಗುವುದು ಸಂತ್ರಸ್ತೆಯರೇ ಎಂಬ ಸಣ್ಣ ಮಾನವೀಯ ಗುಣವೂ ಇಲ್ಲದ ಈ ಪುರುಷರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯೇ ಕಾಣುತ್ತಿಲ್ಲ. ಈ ಸಂದರ್ಭದಲ್ಲಿ ಅಂತಃಕರಣದ ಮನಸ್ಸುಗಳು ಸಂತ್ರಸ್ತೆಯ ಬಗ್ಗೆ ಅನುಕಂಪ, ಆದರಗಳಿಂದ ಮಾತನಾಡಬೇಕಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಘಾಸಿಯಾಗಿರುವ ಸಂತ್ರಸ್ತೆಯರಿಗೆ ಮನೋಸ್ಥೈರ್ಯ ಲಭಿಸುತ್ತದೆ. ಆಗ ಅವರು ಸ್ವಯಂಪ್ರೇರಿತವಾಗಿ ತಮ್ಮ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ನ್ಯಾಯಕ್ಕಾಗಿ ಹೋರಾಟಕ್ಕೆ ಇಳಿಯಬಹುದು. ಅಂತಹ ಆಶಯ ನಮ್ಮೊಳಗೆ ಸದಾ ಜಾಗೃತವಾಗಿರುವುದು ಈ ಪ್ರಕರಣದ ಸಂದರ್ಭದಲ್ಲಿ ಅತ್ಯಂತ ಅಗತ್ಯ.

-ಎಸ್.ಎಂ.ಜಯಂತಿ, ಸರಸ್ವತಿಪುರಂ, ಮೈಸೂರು.

andolana

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

11 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

11 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

12 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

13 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

13 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

16 hours ago