ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯ ಬಗ್ಗೆ ಕುಹಕಗಳು ಕೇಳಿಬರುತ್ತಿವೆ. ಅದು ಸಲ್ಲದು. ಸಂತ್ರಸ್ತೆಯರು ಬಲವಂತವಾಗಿ ಪ್ರಜ್ವಲ್ ಅವರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿರಬಹುದು. ಅಥವಾ ಹಲವು ಚಪಲಕೋರರ ಅನಿಸಿಕೆಯಂತೆ ವಿಲಾಸಿ ಜೀವನಕ್ಕಾಗಿಯೇ ಜೀವನ ಹಾಳು ಮಾಡಿಕೊಂಡಿರಬಹುದು. ಈ ಎಲ್ಲದರ ಹಿಂದೆ ಪುರುಷನೊಬ್ಬನ ಪೈಶಾಚಿಕತೆ ಇದೆ ಎಂಬುದು ಸಾಬೀತಾಗಿದೆ. ಅಲ್ಲದೆ, ಅಶ್ಲೀಲ ಪೆನ್ಡೈವ್ನ್ನು ವಿಡಿಯೋ ಮೂಲಕ ಹರಿಯಬಿಟ್ಟವರು ಕೂಡ ಪುರುಷರೇ ಆಗಿರುತ್ತಾರೆ. ಸೇಡು, ಚಪಲ, ಕಳ್ಳದಂಧೆಗೆ ರಕ್ಷಣೆ ಇತ್ಯಾದಿ ಯಾವುದೇ ದುರುದ್ದೇಶ ಇರಬಹುದು. ಅದರಿಂದ ಅವಮಾನ, ಅಪಹಾಸ್ಯಕ್ಕೆ ಗುರಿಯಾಗುವುದು ಸಂತ್ರಸ್ತೆಯರೇ ಎಂಬ ಸಣ್ಣ ಮಾನವೀಯ ಗುಣವೂ ಇಲ್ಲದ ಈ ಪುರುಷರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯೇ ಕಾಣುತ್ತಿಲ್ಲ. ಈ ಸಂದರ್ಭದಲ್ಲಿ ಅಂತಃಕರಣದ ಮನಸ್ಸುಗಳು ಸಂತ್ರಸ್ತೆಯ ಬಗ್ಗೆ ಅನುಕಂಪ, ಆದರಗಳಿಂದ ಮಾತನಾಡಬೇಕಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಘಾಸಿಯಾಗಿರುವ ಸಂತ್ರಸ್ತೆಯರಿಗೆ ಮನೋಸ್ಥೈರ್ಯ ಲಭಿಸುತ್ತದೆ. ಆಗ ಅವರು ಸ್ವಯಂಪ್ರೇರಿತವಾಗಿ ತಮ್ಮ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ನ್ಯಾಯಕ್ಕಾಗಿ ಹೋರಾಟಕ್ಕೆ ಇಳಿಯಬಹುದು. ಅಂತಹ ಆಶಯ ನಮ್ಮೊಳಗೆ ಸದಾ ಜಾಗೃತವಾಗಿರುವುದು ಈ ಪ್ರಕರಣದ ಸಂದರ್ಭದಲ್ಲಿ ಅತ್ಯಂತ ಅಗತ್ಯ.
-ಎಸ್.ಎಂ.ಜಯಂತಿ, ಸರಸ್ವತಿಪುರಂ, ಮೈಸೂರು.
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…