ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯ ಬಗ್ಗೆ ಕುಹಕಗಳು ಕೇಳಿಬರುತ್ತಿವೆ. ಅದು ಸಲ್ಲದು. ಸಂತ್ರಸ್ತೆಯರು ಬಲವಂತವಾಗಿ ಪ್ರಜ್ವಲ್ ಅವರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿರಬಹುದು. ಅಥವಾ ಹಲವು ಚಪಲಕೋರರ ಅನಿಸಿಕೆಯಂತೆ ವಿಲಾಸಿ ಜೀವನಕ್ಕಾಗಿಯೇ ಜೀವನ ಹಾಳು ಮಾಡಿಕೊಂಡಿರಬಹುದು. ಈ ಎಲ್ಲದರ ಹಿಂದೆ ಪುರುಷನೊಬ್ಬನ ಪೈಶಾಚಿಕತೆ ಇದೆ ಎಂಬುದು ಸಾಬೀತಾಗಿದೆ. ಅಲ್ಲದೆ, ಅಶ್ಲೀಲ ಪೆನ್ಡೈವ್ನ್ನು ವಿಡಿಯೋ ಮೂಲಕ ಹರಿಯಬಿಟ್ಟವರು ಕೂಡ ಪುರುಷರೇ ಆಗಿರುತ್ತಾರೆ. ಸೇಡು, ಚಪಲ, ಕಳ್ಳದಂಧೆಗೆ ರಕ್ಷಣೆ ಇತ್ಯಾದಿ ಯಾವುದೇ ದುರುದ್ದೇಶ ಇರಬಹುದು. ಅದರಿಂದ ಅವಮಾನ, ಅಪಹಾಸ್ಯಕ್ಕೆ ಗುರಿಯಾಗುವುದು ಸಂತ್ರಸ್ತೆಯರೇ ಎಂಬ ಸಣ್ಣ ಮಾನವೀಯ ಗುಣವೂ ಇಲ್ಲದ ಈ ಪುರುಷರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯೇ ಕಾಣುತ್ತಿಲ್ಲ. ಈ ಸಂದರ್ಭದಲ್ಲಿ ಅಂತಃಕರಣದ ಮನಸ್ಸುಗಳು ಸಂತ್ರಸ್ತೆಯ ಬಗ್ಗೆ ಅನುಕಂಪ, ಆದರಗಳಿಂದ ಮಾತನಾಡಬೇಕಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಘಾಸಿಯಾಗಿರುವ ಸಂತ್ರಸ್ತೆಯರಿಗೆ ಮನೋಸ್ಥೈರ್ಯ ಲಭಿಸುತ್ತದೆ. ಆಗ ಅವರು ಸ್ವಯಂಪ್ರೇರಿತವಾಗಿ ತಮ್ಮ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ನ್ಯಾಯಕ್ಕಾಗಿ ಹೋರಾಟಕ್ಕೆ ಇಳಿಯಬಹುದು. ಅಂತಹ ಆಶಯ ನಮ್ಮೊಳಗೆ ಸದಾ ಜಾಗೃತವಾಗಿರುವುದು ಈ ಪ್ರಕರಣದ ಸಂದರ್ಭದಲ್ಲಿ ಅತ್ಯಂತ ಅಗತ್ಯ.
-ಎಸ್.ಎಂ.ಜಯಂತಿ, ಸರಸ್ವತಿಪುರಂ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…