Andolana originals

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ ಎರಡು ಸ್ಥಾನಗಳನ್ನು ಗಳಿಸಿದೆ. ಜಾ.ದಳ ಅಭ್ಯರ್ಥಿ ಪರಾಭವಗೊಂಡಿದ್ದಾರೆ. ಈ ಚುನಾವಣೆಯಲ್ಲಿ ಕೆಲವು ಬಿಜೆಪಿ ಹಾಗೂ ಜಾ.ದಳ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದರ ಬಗ್ಗೆ ಅಂತರಿಕ ತನಿಖೆ ನಡೆಸಲಾಗುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ. ಪ್ರತಿಬಾರಿ ವಿಧಾನ ಪರಿಷತ್ತಿನ ಚುನಾವಣೆ ನಡೆದಾಗಲೂ ಇಂತಹ ಆರೋಪ- ಪ್ರತ್ಯಾರೋಪ ಕೇಳಿ ಬರುತ್ತಲೇ ಇರುತ್ತದೆ. ಕೆಲವು ವರ್ಷಗಳ ಹಿಂದೆ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರು, ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಲು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಬೇಕು ಎಂಬ ಸೋಟಕ ಹೇಳಿಕೆ ನೀಡಿದ್ದರು.

ಹೀಗಾಗಿಯೇ ರಾಜಕೀಯ ಪಕ್ಷಗಳು ಹೆಚ್ಚಾಗಿ ಕೋಟ್ಯಂತರ ರೂಪಾಯಿಗಳ ಕುಳಗಳನ್ನೇ ಅಭ್ಯರ್ಥಿಗಳನ್ನಾಗಿ ನಿಲ್ಲಿಸುವ ಪರಿಪಾಠ ಹೊಂದಿವೆ. ವಿಧಾನ ಪರಿಷತ್ತು ಹಿರಿಯರ ಮನೆ ಎಂಬ ಗೌರವಕ್ಕೆ ಪಾತ್ರವಾಗಿದೆ. ಅಲ್ಲಿನ ಸದಸ್ಯರು ಹೆಚ್ಚು ಪ್ರeವಂತರು ಹಾಗೂ ಜನಪರ ಕಾಳಜಿಯುಳ್ಳವಂತಹವರು ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಿಧಾನ ಪರಿಷತ್ತಿನ ಮಹತ್ವ ಕುಗ್ಗುತ್ತಿದೆಯೇನೋ ಎಂಬ ಭಾವನೆ ಜನಸಾಮಾನ್ಯರಲ್ಲಿ ಮೂಡುತ್ತಿದೆ. ಆಂಧ್ರಪ್ರದೇಶ ಸೇರಿದಂತೆ, ಅನೇಕ ರಾಜ್ಯಗಳಲ್ಲಿ ವಿಧಾನ ಪರಿಷತ್ತನ್ನೇ ರದ್ದುಗೊಳಿಸಲಾಗಿದೆ.

ದೇಶದ ಬೆರಳೆಣಿಕೆಯಷ್ಟು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್ತು ಅಸ್ತಿತ್ವದಲ್ಲಿದೆ. ಅದೇನೇ ಇರಲಿ, ಈಗ ವಿಜೇತರಾಗಿರುವ ಸದಸ್ಯರು, ಈ ಸದನದ ಘನತೆ ಮತ್ತು ಗಾಂಭಿರ್ಯವನ್ನು ಹೆಚ್ಚಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಆಶಿಸೋಣ.

-ಕೆ.ವಿ.ವಾಸು, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

1 hour ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

1 hour ago

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

4 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

4 hours ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

4 hours ago