ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ ಎರಡು ಸ್ಥಾನಗಳನ್ನು ಗಳಿಸಿದೆ. ಜಾ.ದಳ ಅಭ್ಯರ್ಥಿ ಪರಾಭವಗೊಂಡಿದ್ದಾರೆ. ಈ ಚುನಾವಣೆಯಲ್ಲಿ ಕೆಲವು ಬಿಜೆಪಿ ಹಾಗೂ ಜಾ.ದಳ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದರ ಬಗ್ಗೆ ಅಂತರಿಕ ತನಿಖೆ ನಡೆಸಲಾಗುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ. ಪ್ರತಿಬಾರಿ ವಿಧಾನ ಪರಿಷತ್ತಿನ ಚುನಾವಣೆ ನಡೆದಾಗಲೂ ಇಂತಹ ಆರೋಪ- ಪ್ರತ್ಯಾರೋಪ ಕೇಳಿ ಬರುತ್ತಲೇ ಇರುತ್ತದೆ. ಕೆಲವು ವರ್ಷಗಳ ಹಿಂದೆ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರು, ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಲು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಬೇಕು ಎಂಬ ಸೋಟಕ ಹೇಳಿಕೆ ನೀಡಿದ್ದರು.
ಹೀಗಾಗಿಯೇ ರಾಜಕೀಯ ಪಕ್ಷಗಳು ಹೆಚ್ಚಾಗಿ ಕೋಟ್ಯಂತರ ರೂಪಾಯಿಗಳ ಕುಳಗಳನ್ನೇ ಅಭ್ಯರ್ಥಿಗಳನ್ನಾಗಿ ನಿಲ್ಲಿಸುವ ಪರಿಪಾಠ ಹೊಂದಿವೆ. ವಿಧಾನ ಪರಿಷತ್ತು ಹಿರಿಯರ ಮನೆ ಎಂಬ ಗೌರವಕ್ಕೆ ಪಾತ್ರವಾಗಿದೆ. ಅಲ್ಲಿನ ಸದಸ್ಯರು ಹೆಚ್ಚು ಪ್ರeವಂತರು ಹಾಗೂ ಜನಪರ ಕಾಳಜಿಯುಳ್ಳವಂತಹವರು ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಿಧಾನ ಪರಿಷತ್ತಿನ ಮಹತ್ವ ಕುಗ್ಗುತ್ತಿದೆಯೇನೋ ಎಂಬ ಭಾವನೆ ಜನಸಾಮಾನ್ಯರಲ್ಲಿ ಮೂಡುತ್ತಿದೆ. ಆಂಧ್ರಪ್ರದೇಶ ಸೇರಿದಂತೆ, ಅನೇಕ ರಾಜ್ಯಗಳಲ್ಲಿ ವಿಧಾನ ಪರಿಷತ್ತನ್ನೇ ರದ್ದುಗೊಳಿಸಲಾಗಿದೆ.
ದೇಶದ ಬೆರಳೆಣಿಕೆಯಷ್ಟು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್ತು ಅಸ್ತಿತ್ವದಲ್ಲಿದೆ. ಅದೇನೇ ಇರಲಿ, ಈಗ ವಿಜೇತರಾಗಿರುವ ಸದಸ್ಯರು, ಈ ಸದನದ ಘನತೆ ಮತ್ತು ಗಾಂಭಿರ್ಯವನ್ನು ಹೆಚ್ಚಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಆಶಿಸೋಣ.
-ಕೆ.ವಿ.ವಾಸು, ಮೈಸೂರು
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…