Andolana originals

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಕೇವಲ ೯೦ ಗ್ರಂಥಪಾಲಕರಿದ್ದರೆ ಗುಣಮಟ್ಟದ ಶಿಕ್ಷಣ ನೀಡಲು ಹೇಗೆ ಸಾಧ್ಯ? eನಾಧಾರಿತ ಸಮಾಜ ನಿರ್ಮಿಸುತ್ತೇವೆ ಎಂದು ಹೇಳಿಕೊಳ್ಳುವ ಆಡಳಿತಗಾರರು ಲೈಬ್ರರಿ ಸೈನ್ಸ್ ಪದವೀಧರರ ವಯೋಮಿತಿ ಮೀರುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿರುವುದು ಶೋಚನೀಯ.

ಉನ್ನತ ಶಿಕ್ಷಣ ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳು ಇಂದು ಜ್ಞಾನಕೇಂದ್ರಗಳಾಗದೆ ಬರಿ ದೂಳು ತಿನ್ನುವ ಕೊಠಡಿಗಳಾಗಿವೆ. ಶೈಕ್ಷಣಿಕ ವ್ಯವಸ್ಥೆಯ ಬೆನ್ನೆಲುಬಾದ ಗ್ರಂಥಾಲಯಗಳನ್ನು ದಷ್ಟಪುಷ್ಟಗೊಳಿಸದೆ, ಗುತ್ತಿಗೆ ಆಧಾರದ ಶೋಷಣೆ ಮುಂದುವರಿಸುವುದು ಖಂಡನೀಯ.

ಯುಜಿಸಿ ಮತ್ತು ಎಐಸಿಟಿಇ ಮಾನದಂಡಗಳಂತೆ ಸರ್ಕಾರ ತಕ್ಷಣವೇ ಶಾಶ್ವತ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಅಕ್ಷರ ದೇಗುಲಗಳನ್ನು ಅನಾಥಗೊಳಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಟವಾಡುವುದನ್ನು ಸರ್ಕಾರ ತಕ್ಷಣವೇ ನಿಲ್ಲಿಸಬೇಕು.

ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

1 hour ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

2 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

2 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

2 hours ago

ಕಾವೇರಿ ಕಣಿವೆ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ

ಕೆ.ಬಿ.ರಮೇಶನಾಯಕ ೨೦೧೫, ೨೦೧೬ರ ಅವಧಿಯಲ್ಲಿ ಇದ್ದಷ್ಟೇ ಈ ಬಾರಿಯೂ ಜಲಾಶಯಗಳಲ್ಲಿ ನೀರು ಮೈಸೂರು: ಕೇರಳದ ವಯನಾಡು, ಕೊಡಗಿನ ಭಾಗಮಂಡಲ ಭಾಗದಲ್ಲಿ…

2 hours ago

ಮುಂಗಾರು ಮುನಿದರೂ ಬೆಳೆ ವಿಮೆಗಿಲ್ಲ ರೈತರ ಆಸಕ್ತಿ

ಗಿರೀಶ್ ಹುಣಸೂರು ಜಿಲ್ಲೆಯಲ್ಲಿ ಈವರೆಗೆ ೬,೯೧೦ ರೈತರಿಂದಷ್ಟೇ ಬೆಳೆ ವಿಮೆ ನೋಂದಣಿ ಮೈಸೂರು: ಮುಂಗಾರು ಮಳೆಯ ಕಣ್ಣಾಮುಚ್ಚಾಲೆಯಿಂದಾಗಿ ಪ್ರಸಕ್ತ ವರ್ಷ…

2 hours ago