Mysore
23
clear sky

Social Media

ಭಾನುವಾರ, 12 ಏಪ್ರಿಲ 2026
Light
Dark

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…  

ಓದುಗರ ಪತ್ರ

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಿಗದೆ ಆಟೋ ಚಾಲಕರ ಜೀವನ ನಿರ್ವಹಣೆ ಕಷ್ಟವಾಗಿದೆ. ದಿನಗಟ್ಟಲೆ ಕಾದರೂ ಜೀವನದ ನಿರ್ವಹಣೆಗೆ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಕೊರೋನ ಸಂದರ್ಭಕ್ಕಿಂತ ಈ ಯುದ್ಧದ ಸಂದರ್ಭ ಸಾರ್ವಜನಿಕರನ್ನು ಕಂಗೆಡಿಸಿದೆ. ಆಟೋ ಚಾಲಕರು, ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ. ಯುದ್ಧದ ಪರಿಣಾಮ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಕೆಲ ಕುಟುಂಬದಲ್ಲಿ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಮಕ್ಕಳ ವಿದ್ಯಾಭ್ಯಾಸ, ಜೀವನ ನಿರ್ವಹಣೆಗೆ ಏನು ಮಾಡಬೇಕೆಂದು ತಲೆ ಮೇಲೆ ಕೈ ಇಟ್ಟುಕೊಂಡು ಕುಳಿತಿರುವವರು ಅನೇಕ ಮಂದಿ. ನಿರುದ್ಯೋಗ ಸಮಸ್ಯೆಗಳನ್ನು ಎದುರುತ್ತಿರುವ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯವನ್ನು ಸರ್ಕಾರ ಮಾಡಬೇಕಾಗಿದೆ. ದಾನಿಗಳು, ಅನುಕೂಲಸ್ಥರು ಇವರ ಕಷ್ಟಗಳನ್ನು ಅರಿಯಬೇಕಾಗಿದೆ.

ಈ ಸಂದರ್ಭದಲ್ಲಿ ಅನವಶ್ಯಕ ಕಾರ್ಯಕ್ರಮಗಳು, ರಾಜಕೀಯ ಕಾರ್ಯಕ್ರಮಗಳಿಗೆ ನಿಯಂತ್ರಣವಿರಬೇಕು. ತೊಂದರೆಯಲ್ಲಿರುವವರ ಪರಿಸ್ಥಿತಿಯನ್ನು ಅರಿತು ಜೀವನದ ನಿರ್ವಹಣೆಗೆ ಸಂಘ-ಸಂಸ್ಥೆಗಳು ಮುಂದೆ ಬಂದು ಆಹಾರದ ಕಿಟ್‌ಗಳನ್ನು ಒದಗಿಸಿ ಅವರ ಸಂಕಷ್ಟದಲ್ಲಿ ಭಾಗಿಯಾಗಬೇಕಾಗಿದೆ.

-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

Tags:
error: Content is protected !!