ಓದುಗರ ಪತ್ರ
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗದೆ ಆಟೋ ಚಾಲಕರ ಜೀವನ ನಿರ್ವಹಣೆ ಕಷ್ಟವಾಗಿದೆ. ದಿನಗಟ್ಟಲೆ ಕಾದರೂ ಜೀವನದ ನಿರ್ವಹಣೆಗೆ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಕೊರೋನ ಸಂದರ್ಭಕ್ಕಿಂತ ಈ ಯುದ್ಧದ ಸಂದರ್ಭ ಸಾರ್ವಜನಿಕರನ್ನು ಕಂಗೆಡಿಸಿದೆ. ಆಟೋ ಚಾಲಕರು, ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ. ಯುದ್ಧದ ಪರಿಣಾಮ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಕೆಲ ಕುಟುಂಬದಲ್ಲಿ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಮಕ್ಕಳ ವಿದ್ಯಾಭ್ಯಾಸ, ಜೀವನ ನಿರ್ವಹಣೆಗೆ ಏನು ಮಾಡಬೇಕೆಂದು ತಲೆ ಮೇಲೆ ಕೈ ಇಟ್ಟುಕೊಂಡು ಕುಳಿತಿರುವವರು ಅನೇಕ ಮಂದಿ. ನಿರುದ್ಯೋಗ ಸಮಸ್ಯೆಗಳನ್ನು ಎದುರುತ್ತಿರುವ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯವನ್ನು ಸರ್ಕಾರ ಮಾಡಬೇಕಾಗಿದೆ. ದಾನಿಗಳು, ಅನುಕೂಲಸ್ಥರು ಇವರ ಕಷ್ಟಗಳನ್ನು ಅರಿಯಬೇಕಾಗಿದೆ.
ಈ ಸಂದರ್ಭದಲ್ಲಿ ಅನವಶ್ಯಕ ಕಾರ್ಯಕ್ರಮಗಳು, ರಾಜಕೀಯ ಕಾರ್ಯಕ್ರಮಗಳಿಗೆ ನಿಯಂತ್ರಣವಿರಬೇಕು. ತೊಂದರೆಯಲ್ಲಿರುವವರ ಪರಿಸ್ಥಿತಿಯನ್ನು ಅರಿತು ಜೀವನದ ನಿರ್ವಹಣೆಗೆ ಸಂಘ-ಸಂಸ್ಥೆಗಳು ಮುಂದೆ ಬಂದು ಆಹಾರದ ಕಿಟ್ಗಳನ್ನು ಒದಗಿಸಿ ಅವರ ಸಂಕಷ್ಟದಲ್ಲಿ ಭಾಗಿಯಾಗಬೇಕಾಗಿದೆ.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…