Andolana originals

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಿಗದೆ ಆಟೋ ಚಾಲಕರ ಜೀವನ ನಿರ್ವಹಣೆ ಕಷ್ಟವಾಗಿದೆ. ದಿನಗಟ್ಟಲೆ ಕಾದರೂ ಜೀವನದ ನಿರ್ವಹಣೆಗೆ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಕೊರೋನ ಸಂದರ್ಭಕ್ಕಿಂತ ಈ ಯುದ್ಧದ ಸಂದರ್ಭ ಸಾರ್ವಜನಿಕರನ್ನು ಕಂಗೆಡಿಸಿದೆ. ಆಟೋ ಚಾಲಕರು, ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ. ಯುದ್ಧದ ಪರಿಣಾಮ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಕೆಲ ಕುಟುಂಬದಲ್ಲಿ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಮಕ್ಕಳ ವಿದ್ಯಾಭ್ಯಾಸ, ಜೀವನ ನಿರ್ವಹಣೆಗೆ ಏನು ಮಾಡಬೇಕೆಂದು ತಲೆ ಮೇಲೆ ಕೈ ಇಟ್ಟುಕೊಂಡು ಕುಳಿತಿರುವವರು ಅನೇಕ ಮಂದಿ. ನಿರುದ್ಯೋಗ ಸಮಸ್ಯೆಗಳನ್ನು ಎದುರುತ್ತಿರುವ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯವನ್ನು ಸರ್ಕಾರ ಮಾಡಬೇಕಾಗಿದೆ. ದಾನಿಗಳು, ಅನುಕೂಲಸ್ಥರು ಇವರ ಕಷ್ಟಗಳನ್ನು ಅರಿಯಬೇಕಾಗಿದೆ.

ಈ ಸಂದರ್ಭದಲ್ಲಿ ಅನವಶ್ಯಕ ಕಾರ್ಯಕ್ರಮಗಳು, ರಾಜಕೀಯ ಕಾರ್ಯಕ್ರಮಗಳಿಗೆ ನಿಯಂತ್ರಣವಿರಬೇಕು. ತೊಂದರೆಯಲ್ಲಿರುವವರ ಪರಿಸ್ಥಿತಿಯನ್ನು ಅರಿತು ಜೀವನದ ನಿರ್ವಹಣೆಗೆ ಸಂಘ-ಸಂಸ್ಥೆಗಳು ಮುಂದೆ ಬಂದು ಆಹಾರದ ಕಿಟ್‌ಗಳನ್ನು ಒದಗಿಸಿ ಅವರ ಸಂಕಷ್ಟದಲ್ಲಿ ಭಾಗಿಯಾಗಬೇಕಾಗಿದೆ.

-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

6 hours ago