ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಮೈಸೂರಿನ ಪಾರಂಪರಿಕ ಕಟ್ಟಡಗಳು ಹಾಗೂ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ.
ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡುವ ವೇಳೆ ಕಟ್ಟಡದ ಗೋಡೆಗಳಿಗೆ ಕಬ್ಬಿಣದ ದೊಡ್ಡ ದೊಡ್ಡ ಸಲಾಕೆಗಳು ಹಾಗೂ ಮೊಳೆಗಳನ್ನು ಹೊಡೆಯಲಾಗುತ್ತದೆ. ಆದರೆ ದಸರಾ ಮುಗಿದ ನಂತರ ಈ ಮೊಳೆಗಳನ್ನು ಹೊಡೆದ ಜಾಗಗಳು ರಂಧ್ರಗಳಾಗಿದ್ದರೂ ಅವುಗಳನ್ನು ಮುಚ್ಚುವ ಕಡೆ ಗಮನಹರಿಸುವುದಿಲ್ಲ. ಇದರಿಂದಾಗಿ ಕಟ್ಟಡದ ವಿವಿಧ ಭಾಗಗಳಲ್ಲಿಯೂ ತೂತು ಬಿದ್ದು, ಕಟ್ಟಡ ಸಡಿಲಗೊಳ್ಳಲಿದೆ. ನಗರದ ಅನೇಕ ಪಾರಂಪರಿಕ ಕಟ್ಟಡಗಳು ಸಡಿಲಗೊಳ್ಳಲು ಇದೂ ಒಂದು ಪ್ರಮುಖ ಕಾರಣವಾಗಿದೆ. ಆದ್ದರಿಂದ ದೀಪಾಲಂಕಾರ ಮಾಡುವ ಗುತ್ತಿಗೆ ಪಡೆದವರು ದಸರಾ ಮುಗಿದ ಬಳಿಕ ಮೊಳೆ ಹಾಗೂ ಸಲಾಕೆಗಳನ್ನು ಹೊಡೆದ ಜಾಗವನ್ನು ಸಿಮೆಂಟ್ನಿಂದ ಮುಚ್ಚಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…