ಓದುಗರ ಪತ್ರ
ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಮೈಸೂರಿನ ಪಾರಂಪರಿಕ ಕಟ್ಟಡಗಳು ಹಾಗೂ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ.
ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡುವ ವೇಳೆ ಕಟ್ಟಡದ ಗೋಡೆಗಳಿಗೆ ಕಬ್ಬಿಣದ ದೊಡ್ಡ ದೊಡ್ಡ ಸಲಾಕೆಗಳು ಹಾಗೂ ಮೊಳೆಗಳನ್ನು ಹೊಡೆಯಲಾಗುತ್ತದೆ. ಆದರೆ ದಸರಾ ಮುಗಿದ ನಂತರ ಈ ಮೊಳೆಗಳನ್ನು ಹೊಡೆದ ಜಾಗಗಳು ರಂಧ್ರಗಳಾಗಿದ್ದರೂ ಅವುಗಳನ್ನು ಮುಚ್ಚುವ ಕಡೆ ಗಮನಹರಿಸುವುದಿಲ್ಲ. ಇದರಿಂದಾಗಿ ಕಟ್ಟಡದ ವಿವಿಧ ಭಾಗಗಳಲ್ಲಿಯೂ ತೂತು ಬಿದ್ದು, ಕಟ್ಟಡ ಸಡಿಲಗೊಳ್ಳಲಿದೆ. ನಗರದ ಅನೇಕ ಪಾರಂಪರಿಕ ಕಟ್ಟಡಗಳು ಸಡಿಲಗೊಳ್ಳಲು ಇದೂ ಒಂದು ಪ್ರಮುಖ ಕಾರಣವಾಗಿದೆ. ಆದ್ದರಿಂದ ದೀಪಾಲಂಕಾರ ಮಾಡುವ ಗುತ್ತಿಗೆ ಪಡೆದವರು ದಸರಾ ಮುಗಿದ ಬಳಿಕ ಮೊಳೆ ಹಾಗೂ ಸಲಾಕೆಗಳನ್ನು ಹೊಡೆದ ಜಾಗವನ್ನು ಸಿಮೆಂಟ್ನಿಂದ ಮುಚ್ಚಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…
ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…
ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…