Andolana originals

ಓದುಗರ ಪತ್ರ| ಯಾತ್ರೆಗಳ ಬದಲಾಗಿ ಜನರ ಸಂಕಷ್ಟ ಆಲಿಸಿ

ಬಿಜೆಪಿ ಮತ್ತು ಜಾ.ದಳ ಮೈತ್ರಿಕೂಟದ ಮೈಸೂರು ಚಲೋ ಪಾದಯಾತ್ರೆ, ಕಾಂಗ್ರೆಸ್‌ನವರ ಜನಾಂದೋಲನ ಸಮಾವೇಶ ಮುಗಿಯುತ್ತಿರುವಂತೆಯೇ ಹಾಗೂ ಪಾದಯಾತ್ರೆಯ ವೇಳೆ ಚುನಾಯಿತ ಪ್ರತಿನಿಧಿಗಳು ಪರಸ್ಪರ ನಿಂದಿಸಿಕೊಂಡು ಮಾಡಿದ ವಾಗ್ದಾಳಿಗಳು ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಮತ್ತಷ್ಟು ಪಾದಯಾತ್ರೆಗಳು ರಾಜ್ಯದಲ್ಲಿ ನಡೆಯುವ ಸೂಚನೆಗಳಿವೆ.

ಬಸನಗೌಡ ಪಾಟೀಲ್ ಯತ್ನಾಳರ ಬೀದ‌ ನಿಂದ ಬಳ್ಳಾರಿವರೆಗಿನ ಪಾದಯಾತ್ರೆ, ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ನ್ಯಾಯಯಾತ್ರೆ ಮತ್ತು ಬಿಜೆಪಿಯ ತಿರಂಗ ಯಾತ್ರೆ ಸದ್ಯದಲ್ಲೇ ಆರಂಭವಾಗಲಿದೆ.

ಈ ಪಾದಯಾತ್ರೆಗಳಿಂದ ಜನರಿಗೇನು ಲಾಭವಾಗಿದೆಯೋ ತಿಳಿಯದು. ಈ ರಾಜಕೀಯ ಪಕ್ಷಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೂ ಪಾದಯಾತ್ರೆಗಳ ಮೂಲಕ ಪರಸ್ಪರ ನಿಂದಿಸಿಕೊಳ್ಳುತ್ತಾ, ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಾ ಕಾಲಕಳೆಯುತ್ತಿದ್ದು, ಈ ನಡವಳಿಕೆ ರಾಜಕೀಯ ಮೌಲ್ಯ ಕುಂದುವಂತೆ ಮಾಡಿರುವುದಂತೂ ನಿಜ. ಈ ಪಾದಯಾತ್ರೆಗಳ ಅಜೆಂಡಾವನ್ನು ಸೂಕ್ಷ್ಮ ವಾಗಿ ಗಮನಿಸಿದರೆ, ಈ ರಾಜಕೀಯ ಪಕ್ಷಗಳಿಗೆ ಸರ್ಕಾರಗಳನ್ನು ಉರುಳಿಸುವುದು ಮತ್ತು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವುದು ಮಾತ್ರ ಮುಖ್ಯವೇನೋ ಅನಿಸುತ್ತದೆ.

ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಹೈರಾಣಾಗಿದೆ. ಸಾಕಷ್ಟು ಕಡೆ ಭೂಕುಸಿತ-ಜಲಪ್ರವಾಹಗಳು ಉಂಟಾಗಿ ಸಾಕಷ್ಟು ಸಾವು-ನೋವುಗಳು ಸಂಭವಿಸಿದೆ. ಇವುಗಳ ಅರಿವೇ ಇಲ್ಲದೇ ರಾಜಕೀಯ ಪಕ್ಷಗಳು ತಮ್ಮ ಹಿತಕ್ಕಾಗಿ ಪಾದಯಾತ್ರೆಗಳನ್ನು ಮಾಡಿಕೊಂಡು ಸುಖಾಸುಮ್ಮನೆ ಕಾಲಹರಣ ಮಾಡುತ್ತಿರುವುದು ಸರಿಯೇ? ಮುಂದಾದರೂ ಚುನಾಯಿತ ಪ್ರತಿನಿಧಿಗಳು ಜವಾಬ್ದಾರಿಯಿಂದ ವರ್ತಿಸಿ ಜನಸಾಮಾನ್ಯರ ಬವಣೆಗಳನ್ನು ಆಲಿಸಿ ಪರಿಹರಿಸಲು ಶ್ರಮಿಸಲಿ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

37 mins ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

3 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

3 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

3 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

3 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

5 hours ago