Andolana originals

ಓದುಗರ ಪತ್ರ| ಯಾತ್ರೆಗಳ ಬದಲಾಗಿ ಜನರ ಸಂಕಷ್ಟ ಆಲಿಸಿ

ಬಿಜೆಪಿ ಮತ್ತು ಜಾ.ದಳ ಮೈತ್ರಿಕೂಟದ ಮೈಸೂರು ಚಲೋ ಪಾದಯಾತ್ರೆ, ಕಾಂಗ್ರೆಸ್‌ನವರ ಜನಾಂದೋಲನ ಸಮಾವೇಶ ಮುಗಿಯುತ್ತಿರುವಂತೆಯೇ ಹಾಗೂ ಪಾದಯಾತ್ರೆಯ ವೇಳೆ ಚುನಾಯಿತ ಪ್ರತಿನಿಧಿಗಳು ಪರಸ್ಪರ ನಿಂದಿಸಿಕೊಂಡು ಮಾಡಿದ ವಾಗ್ದಾಳಿಗಳು ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಮತ್ತಷ್ಟು ಪಾದಯಾತ್ರೆಗಳು ರಾಜ್ಯದಲ್ಲಿ ನಡೆಯುವ ಸೂಚನೆಗಳಿವೆ.

ಬಸನಗೌಡ ಪಾಟೀಲ್ ಯತ್ನಾಳರ ಬೀದ‌ ನಿಂದ ಬಳ್ಳಾರಿವರೆಗಿನ ಪಾದಯಾತ್ರೆ, ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ನ್ಯಾಯಯಾತ್ರೆ ಮತ್ತು ಬಿಜೆಪಿಯ ತಿರಂಗ ಯಾತ್ರೆ ಸದ್ಯದಲ್ಲೇ ಆರಂಭವಾಗಲಿದೆ.

ಈ ಪಾದಯಾತ್ರೆಗಳಿಂದ ಜನರಿಗೇನು ಲಾಭವಾಗಿದೆಯೋ ತಿಳಿಯದು. ಈ ರಾಜಕೀಯ ಪಕ್ಷಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೂ ಪಾದಯಾತ್ರೆಗಳ ಮೂಲಕ ಪರಸ್ಪರ ನಿಂದಿಸಿಕೊಳ್ಳುತ್ತಾ, ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಾ ಕಾಲಕಳೆಯುತ್ತಿದ್ದು, ಈ ನಡವಳಿಕೆ ರಾಜಕೀಯ ಮೌಲ್ಯ ಕುಂದುವಂತೆ ಮಾಡಿರುವುದಂತೂ ನಿಜ. ಈ ಪಾದಯಾತ್ರೆಗಳ ಅಜೆಂಡಾವನ್ನು ಸೂಕ್ಷ್ಮ ವಾಗಿ ಗಮನಿಸಿದರೆ, ಈ ರಾಜಕೀಯ ಪಕ್ಷಗಳಿಗೆ ಸರ್ಕಾರಗಳನ್ನು ಉರುಳಿಸುವುದು ಮತ್ತು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವುದು ಮಾತ್ರ ಮುಖ್ಯವೇನೋ ಅನಿಸುತ್ತದೆ.

ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಹೈರಾಣಾಗಿದೆ. ಸಾಕಷ್ಟು ಕಡೆ ಭೂಕುಸಿತ-ಜಲಪ್ರವಾಹಗಳು ಉಂಟಾಗಿ ಸಾಕಷ್ಟು ಸಾವು-ನೋವುಗಳು ಸಂಭವಿಸಿದೆ. ಇವುಗಳ ಅರಿವೇ ಇಲ್ಲದೇ ರಾಜಕೀಯ ಪಕ್ಷಗಳು ತಮ್ಮ ಹಿತಕ್ಕಾಗಿ ಪಾದಯಾತ್ರೆಗಳನ್ನು ಮಾಡಿಕೊಂಡು ಸುಖಾಸುಮ್ಮನೆ ಕಾಲಹರಣ ಮಾಡುತ್ತಿರುವುದು ಸರಿಯೇ? ಮುಂದಾದರೂ ಚುನಾಯಿತ ಪ್ರತಿನಿಧಿಗಳು ಜವಾಬ್ದಾರಿಯಿಂದ ವರ್ತಿಸಿ ಜನಸಾಮಾನ್ಯರ ಬವಣೆಗಳನ್ನು ಆಲಿಸಿ ಪರಿಹರಿಸಲು ಶ್ರಮಿಸಲಿ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

5 mins ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

1 hour ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

1 hour ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

2 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

2 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

2 hours ago