ಬಿಜೆಪಿ ಮತ್ತು ಜಾ.ದಳ ಮೈತ್ರಿಕೂಟದ ಮೈಸೂರು ಚಲೋ ಪಾದಯಾತ್ರೆ, ಕಾಂಗ್ರೆಸ್ನವರ ಜನಾಂದೋಲನ ಸಮಾವೇಶ ಮುಗಿಯುತ್ತಿರುವಂತೆಯೇ ಹಾಗೂ ಪಾದಯಾತ್ರೆಯ ವೇಳೆ ಚುನಾಯಿತ ಪ್ರತಿನಿಧಿಗಳು ಪರಸ್ಪರ ನಿಂದಿಸಿಕೊಂಡು ಮಾಡಿದ ವಾಗ್ದಾಳಿಗಳು ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಮತ್ತಷ್ಟು ಪಾದಯಾತ್ರೆಗಳು ರಾಜ್ಯದಲ್ಲಿ ನಡೆಯುವ ಸೂಚನೆಗಳಿವೆ.
ಬಸನಗೌಡ ಪಾಟೀಲ್ ಯತ್ನಾಳರ ಬೀದ ನಿಂದ ಬಳ್ಳಾರಿವರೆಗಿನ ಪಾದಯಾತ್ರೆ, ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ನ್ಯಾಯಯಾತ್ರೆ ಮತ್ತು ಬಿಜೆಪಿಯ ತಿರಂಗ ಯಾತ್ರೆ ಸದ್ಯದಲ್ಲೇ ಆರಂಭವಾಗಲಿದೆ.
ಈ ಪಾದಯಾತ್ರೆಗಳಿಂದ ಜನರಿಗೇನು ಲಾಭವಾಗಿದೆಯೋ ತಿಳಿಯದು. ಈ ರಾಜಕೀಯ ಪಕ್ಷಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೂ ಪಾದಯಾತ್ರೆಗಳ ಮೂಲಕ ಪರಸ್ಪರ ನಿಂದಿಸಿಕೊಳ್ಳುತ್ತಾ, ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಾ ಕಾಲಕಳೆಯುತ್ತಿದ್ದು, ಈ ನಡವಳಿಕೆ ರಾಜಕೀಯ ಮೌಲ್ಯ ಕುಂದುವಂತೆ ಮಾಡಿರುವುದಂತೂ ನಿಜ. ಈ ಪಾದಯಾತ್ರೆಗಳ ಅಜೆಂಡಾವನ್ನು ಸೂಕ್ಷ್ಮ ವಾಗಿ ಗಮನಿಸಿದರೆ, ಈ ರಾಜಕೀಯ ಪಕ್ಷಗಳಿಗೆ ಸರ್ಕಾರಗಳನ್ನು ಉರುಳಿಸುವುದು ಮತ್ತು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವುದು ಮಾತ್ರ ಮುಖ್ಯವೇನೋ ಅನಿಸುತ್ತದೆ.
ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಹೈರಾಣಾಗಿದೆ. ಸಾಕಷ್ಟು ಕಡೆ ಭೂಕುಸಿತ-ಜಲಪ್ರವಾಹಗಳು ಉಂಟಾಗಿ ಸಾಕಷ್ಟು ಸಾವು-ನೋವುಗಳು ಸಂಭವಿಸಿದೆ. ಇವುಗಳ ಅರಿವೇ ಇಲ್ಲದೇ ರಾಜಕೀಯ ಪಕ್ಷಗಳು ತಮ್ಮ ಹಿತಕ್ಕಾಗಿ ಪಾದಯಾತ್ರೆಗಳನ್ನು ಮಾಡಿಕೊಂಡು ಸುಖಾಸುಮ್ಮನೆ ಕಾಲಹರಣ ಮಾಡುತ್ತಿರುವುದು ಸರಿಯೇ? ಮುಂದಾದರೂ ಚುನಾಯಿತ ಪ್ರತಿನಿಧಿಗಳು ಜವಾಬ್ದಾರಿಯಿಂದ ವರ್ತಿಸಿ ಜನಸಾಮಾನ್ಯರ ಬವಣೆಗಳನ್ನು ಆಲಿಸಿ ಪರಿಹರಿಸಲು ಶ್ರಮಿಸಲಿ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…