Andolana originals

ಓದುಗರ ಪತ್ರ| ಯಾತ್ರೆಗಳ ಬದಲಾಗಿ ಜನರ ಸಂಕಷ್ಟ ಆಲಿಸಿ

ಬಿಜೆಪಿ ಮತ್ತು ಜಾ.ದಳ ಮೈತ್ರಿಕೂಟದ ಮೈಸೂರು ಚಲೋ ಪಾದಯಾತ್ರೆ, ಕಾಂಗ್ರೆಸ್‌ನವರ ಜನಾಂದೋಲನ ಸಮಾವೇಶ ಮುಗಿಯುತ್ತಿರುವಂತೆಯೇ ಹಾಗೂ ಪಾದಯಾತ್ರೆಯ ವೇಳೆ ಚುನಾಯಿತ ಪ್ರತಿನಿಧಿಗಳು ಪರಸ್ಪರ ನಿಂದಿಸಿಕೊಂಡು ಮಾಡಿದ ವಾಗ್ದಾಳಿಗಳು ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಮತ್ತಷ್ಟು ಪಾದಯಾತ್ರೆಗಳು ರಾಜ್ಯದಲ್ಲಿ ನಡೆಯುವ ಸೂಚನೆಗಳಿವೆ.

ಬಸನಗೌಡ ಪಾಟೀಲ್ ಯತ್ನಾಳರ ಬೀದ‌ ನಿಂದ ಬಳ್ಳಾರಿವರೆಗಿನ ಪಾದಯಾತ್ರೆ, ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ನ್ಯಾಯಯಾತ್ರೆ ಮತ್ತು ಬಿಜೆಪಿಯ ತಿರಂಗ ಯಾತ್ರೆ ಸದ್ಯದಲ್ಲೇ ಆರಂಭವಾಗಲಿದೆ.

ಈ ಪಾದಯಾತ್ರೆಗಳಿಂದ ಜನರಿಗೇನು ಲಾಭವಾಗಿದೆಯೋ ತಿಳಿಯದು. ಈ ರಾಜಕೀಯ ಪಕ್ಷಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೂ ಪಾದಯಾತ್ರೆಗಳ ಮೂಲಕ ಪರಸ್ಪರ ನಿಂದಿಸಿಕೊಳ್ಳುತ್ತಾ, ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಾ ಕಾಲಕಳೆಯುತ್ತಿದ್ದು, ಈ ನಡವಳಿಕೆ ರಾಜಕೀಯ ಮೌಲ್ಯ ಕುಂದುವಂತೆ ಮಾಡಿರುವುದಂತೂ ನಿಜ. ಈ ಪಾದಯಾತ್ರೆಗಳ ಅಜೆಂಡಾವನ್ನು ಸೂಕ್ಷ್ಮ ವಾಗಿ ಗಮನಿಸಿದರೆ, ಈ ರಾಜಕೀಯ ಪಕ್ಷಗಳಿಗೆ ಸರ್ಕಾರಗಳನ್ನು ಉರುಳಿಸುವುದು ಮತ್ತು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವುದು ಮಾತ್ರ ಮುಖ್ಯವೇನೋ ಅನಿಸುತ್ತದೆ.

ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕು ಹೈರಾಣಾಗಿದೆ. ಸಾಕಷ್ಟು ಕಡೆ ಭೂಕುಸಿತ-ಜಲಪ್ರವಾಹಗಳು ಉಂಟಾಗಿ ಸಾಕಷ್ಟು ಸಾವು-ನೋವುಗಳು ಸಂಭವಿಸಿದೆ. ಇವುಗಳ ಅರಿವೇ ಇಲ್ಲದೇ ರಾಜಕೀಯ ಪಕ್ಷಗಳು ತಮ್ಮ ಹಿತಕ್ಕಾಗಿ ಪಾದಯಾತ್ರೆಗಳನ್ನು ಮಾಡಿಕೊಂಡು ಸುಖಾಸುಮ್ಮನೆ ಕಾಲಹರಣ ಮಾಡುತ್ತಿರುವುದು ಸರಿಯೇ? ಮುಂದಾದರೂ ಚುನಾಯಿತ ಪ್ರತಿನಿಧಿಗಳು ಜವಾಬ್ದಾರಿಯಿಂದ ವರ್ತಿಸಿ ಜನಸಾಮಾನ್ಯರ ಬವಣೆಗಳನ್ನು ಆಲಿಸಿ ಪರಿಹರಿಸಲು ಶ್ರಮಿಸಲಿ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago