Andolana originals

ಓದುಗರ ಪತ್ರ: ಪಂಚಾಯಿತಿ ನೌಕರರ ಸಮಸ್ಯೆ ಆಲಿಸಿ

ಕೆಲವು ದಿನಗಳಿಂದ ಗ್ರಾಮ ಪಂಚಾಯಿತಿ ನೌಕರರು ಹಾಗೂ ಸದಸ್ಯರ ಒಕ್ಕೂಟದವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆಯಿಂದಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ಸಾಕಾರಗೊಳ ಬೇಕಾದರೆ ಗ್ರಾಮ ಪಂಚಾಯಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಆದರೆ ಇಲ್ಲಿ ಪಂಚಾಯಿತಿಯ ನೌಕರರೇ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿರುವುದು ವಿಪರ್ಯಾಸ. ಆದ್ದರಿಂದ ಸರ್ಕಾರ ಆದಷ್ಟು ಬೇಗ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸಿ ಅವರು ಎಂದಿನಂತೆ ತಮ್ಮ ಕೆಲಸ ಕಾರ್ಯಗಳಿಗೆ ಹಾಜರಾಗುವಂತೆ ಮಾಡಬೇಕಿದೆ.

-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

32 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago