ಓದುಗರ ಪತ್ರ
ಎನ್ಐಒಎಸ್ (ರಾಷ್ಟ್ರೀಯ ಮುಕ್ತ ಶಾಲಾ ಶಿಕ್ಷಣ ಸಂಸ್ಥೆ) ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಶಿಕ್ಷಣ ಇಲಾಖೆ ಗಮನಿಸಬೇಕಾದ ಅಗತ್ಯ ಇದೆ. ರಾಷ್ಟ್ರ ಮಟ್ಟದ ಮಾನ್ಯತೆ ಪಡೆದಿದ್ದರೂ ಈ ಮಂಡಳಿಯ ವಿದ್ಯಾರ್ಥಿಗಳಿಗೆ ಅನೇಕ ಕಾಲೇಜುಗಳು ಇನ್ನೂ ಪ್ರವೇಶ ನಿರಾಕರಿಸುತ್ತಿವೆ ಎಂಬ ವರದಿಗಳು ಬರುತ್ತಿವೆ. ಎಐಸಿಟಿಇ, ಯುಜಿಸಿ ಮತ್ತು ಶಿಕ್ಷಣ ಸಚಿವಾಲಯವು ಎನ್ಐಒಎಸ್ ಮಾನ್ಯತೆಯನ್ನು ಸ್ಪಷ್ಟವಾಗಿ ನೀಡಿರುವಾಗಲೂ, ಕೆಲವು ಸಂಸ್ಥೆಗಳು ಮಾನ್ಯವಲ್ಲ ಎಂಬ ನೆಪದಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಪಡಿಸುತ್ತಿವೆ.
ಇದು ಕೇವಲ ಅಜ್ಞಾನವಲ್ಲ , ಅಸಮಾನತೆ ಮತ್ತು ಅಸಂವೇದನಾ ಶೀಲತೆಯ ನಿದರ್ಶನ.ಎನ್ಐಒಎಸ್ ವಿದ್ಯಾರ್ಥಿಗಳು ಕೇವಲ ತಮ್ಮ ಪರಿಶ್ರಮ ಮತ್ತು ಅರ್ಹತೆಗೆ ತಕ್ಕ ಗೌರವವನ್ನು ಮಾತ್ರ ಕೋರುತ್ತಿದ್ದಾರೆ. ಆದರೆ ಸಮಾಜವು ಅವರನ್ನು ಡ್ರಾಪ್ಔಟ್ ಎಂದು ಕಳಂಕಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ನಾಶಮಾಡುತ್ತಿದೆ. ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳು ತಕ್ಷಣವೇ ಕ್ರಮ ಕೈಗೊಂಡು, ಎಲ್ಲ ಕಾಲೇಜುಗಳ ಪ್ರವೇಶ ಪೋರ್ಟಲ್ಗಳಲ್ಲಿ ಎನ್ಐಒಎಸ್ ಮಂಡಳಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಜೊತೆಗೆ ಅಽಕಾರಿಗಳಿಗೆ ಸುತ್ತೋಲೆ ಹೊರಡಿಸಬೇಕು.
– ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…