ಓದುಗರ ಪತ್ರ
ಬಳ್ಳಾರಿಯಲ್ಲಿ ನಡೆಯಲಿರುವ ೮೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಮಾಂಸಾಹಾರವನ್ನೂ ಒದಗಿಸಿ ಆಹಾರ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂದು ಬಳ್ಳಾರಿಯ ದ್ರಾವಿಡ ಕನ್ನಡಿಗರ ಚಳವಳಿ ಸಂಘಟನೆ ಬಳ್ಳಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಯಾವುದೇ ಕನ್ನಡ ಸಾಹಿತ್ಯ ಸಮ್ಮೇಳನಗಳು ‘ಮಾರಮ್ಮನ ಪರ’ ಅಲ್ಲ, ಸಾಹಿತ್ಯ ಸಮ್ಮೇಳನಗಳಲ್ಲಿ ಕನ್ನಡ ಭಾಷೆಯ ಅಳಿವು-ಉಳಿವು, ಕನ್ನಡ ಸಾಹಿತ್ಯ ಲೋಕಕ್ಕೆ ಸಂಬಂಧಿಸಿದಂತೆ ಚರ್ಚೆಗಳು, ಗೋಷ್ಠಿಗಳು ಕನ್ನಡದ ನೆಲ-ಜಲ ಸಂರಕ್ಷಣೆ ಯಲ್ಲಿ ಕನ್ನಡಿಗರ ಪಾತ್ರ, ಕನ್ನಡ ಪರ ಚಳವಳಿಗಳು, ನಶಿಸಿ ಹೋಗುತ್ತಿರುವ ಕನ್ನಡ ಶಾಲೆಗಳ ಉಳಿವು, ಇಂದು ರೈತರು ಅನುಭವಿಸುತ್ತಿರುವ ನೋವುಗಳು ಇವುಗಳ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ ಇವುಗಳ ಪರಿಹಾರಕ್ಕಾಗಿ ಸರ್ಕಾರದ ಗಮನಕ್ಕೆ ತರುವುದು ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ. ಊಟ ಕೇವಲ ನೆಪ ಮಾತ್ರ ಆಗಬೇಕು. ಊಟಕ್ಕೆ ಪ್ರಾಧ್ಯಾನತೆ ಕೊಟ್ಟರೆ ಸಾಹಿತ್ಯ ಸಮ್ಮೇಳನಕ್ಕೆ ಯಾವ ಅರ್ಥವೂ ಇರುವುದಿಲ್ಲ, ಮಂಡ್ಯದಲ್ಲಿ ನಡೆದ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನೀಡುವ ಬಗ್ಗೆ ಪರ-ವಿರುದ್ಧ ಚರ್ಚೆಗಳು ನಡೆದವು, ಕಡೆಗೂ ಸಮ್ಮೇಳನದ ಕಡೆ ದಿನ ಮೊಟ್ಟೆ ನೀಡಲಾಯಿತು, ಕನ್ನಡ ಸಾಹಿತ್ಯ ಸಮ್ಮೇಳನಗಳು ಊಟದ ಜಾತ್ರೆಗಳಾಗಬಾರದು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…