Andolana originals

ಓದುಗರ ಪತ್ರ:  ಸಾಹಿತ್ಯ ಸಮ್ಮೇಳನ ಊಟದ ಜಾತ್ರೆಗಳಾಗದಿರಲಿ

ಬಳ್ಳಾರಿಯಲ್ಲಿ ನಡೆಯಲಿರುವ ೮೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಮಾಂಸಾಹಾರವನ್ನೂ ಒದಗಿಸಿ ಆಹಾರ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂದು ಬಳ್ಳಾರಿಯ ದ್ರಾವಿಡ ಕನ್ನಡಿಗರ ಚಳವಳಿ ಸಂಘಟನೆ ಬಳ್ಳಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಯಾವುದೇ ಕನ್ನಡ ಸಾಹಿತ್ಯ ಸಮ್ಮೇಳನಗಳು ‘ಮಾರಮ್ಮನ ಪರ’ ಅಲ್ಲ, ಸಾಹಿತ್ಯ ಸಮ್ಮೇಳನಗಳಲ್ಲಿ ಕನ್ನಡ ಭಾಷೆಯ ಅಳಿವು-ಉಳಿವು, ಕನ್ನಡ ಸಾಹಿತ್ಯ ಲೋಕಕ್ಕೆ ಸಂಬಂಧಿಸಿದಂತೆ ಚರ್ಚೆಗಳು, ಗೋಷ್ಠಿಗಳು ಕನ್ನಡದ ನೆಲ-ಜಲ ಸಂರಕ್ಷಣೆ ಯಲ್ಲಿ ಕನ್ನಡಿಗರ ಪಾತ್ರ, ಕನ್ನಡ ಪರ ಚಳವಳಿಗಳು, ನಶಿಸಿ ಹೋಗುತ್ತಿರುವ ಕನ್ನಡ ಶಾಲೆಗಳ ಉಳಿವು, ಇಂದು ರೈತರು ಅನುಭವಿಸುತ್ತಿರುವ ನೋವುಗಳು ಇವುಗಳ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ ಇವುಗಳ ಪರಿಹಾರಕ್ಕಾಗಿ ಸರ್ಕಾರದ ಗಮನಕ್ಕೆ ತರುವುದು ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ. ಊಟ ಕೇವಲ ನೆಪ ಮಾತ್ರ ಆಗಬೇಕು. ಊಟಕ್ಕೆ ಪ್ರಾಧ್ಯಾನತೆ ಕೊಟ್ಟರೆ ಸಾಹಿತ್ಯ ಸಮ್ಮೇಳನಕ್ಕೆ ಯಾವ ಅರ್ಥವೂ ಇರುವುದಿಲ್ಲ, ಮಂಡ್ಯದಲ್ಲಿ ನಡೆದ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನೀಡುವ ಬಗ್ಗೆ ಪರ-ವಿರುದ್ಧ ಚರ್ಚೆಗಳು ನಡೆದವು, ಕಡೆಗೂ ಸಮ್ಮೇಳನದ ಕಡೆ ದಿನ ಮೊಟ್ಟೆ ನೀಡಲಾಯಿತು, ಕನ್ನಡ ಸಾಹಿತ್ಯ ಸಮ್ಮೇಳನಗಳು ಊಟದ ಜಾತ್ರೆಗಳಾಗಬಾರದು.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

19 mins ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

54 mins ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

1 hour ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

2 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

4 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

5 hours ago